<p><strong>ನವದೆಹಲಿ: </strong>ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನೀಡಿದ್ದ ಹೇಳಿಕೆಗೆ ಕೆನಡಾದ ಹೈಕಮಿಷನರ್ ಅವರಿಗೆ ಶುಕ್ರವಾರ ಸಮನ್ಸ್ ನೀಡಿದ ಭಾರತ, ರಾಜತಾಂತ್ರಿಕ ಪ್ರತಿಭಟನೆಯನ್ನು ದಾಖಲಿಸಿತು.</p>.<p>‘ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪವನ್ನು ಒಪ್ಪಲಾಗದು. ಈ ಧೋರಣೆ ಮುಂದುವರಿದಿದ್ದೇ ಆದಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂಬುದಾಗಿ ಕೆನಡಾ ಹೈಕಮಿಷನರ್ಗೆ ತಿಳಿಸಲಾಯಿತು’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<p>ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದ ಜಸ್ಟಿನ್ ಟ್ರುಡೊ, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಕೆನಡಾ ಸಮರ್ಥಿಸುತ್ತದೆ’ ಎಂದು ಹೇಳಿದ್ದರಲ್ಲದೇ, ದೆಹಲಿಯಲ್ಲಿನ ಪರಿಸ್ಥಿತಿ ಕಳವಳಕಾರಿ ಎಂದಿದ್ದರು.</p>.<p>‘ಪ್ರಧಾನಿ ಟ್ರುಡೊ ಸೇರಿದಂತೆ ಕೆಲವು ಮುಖಂಡರು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ನೀಡಿದ ಹೇಳಿಕೆಗಳು ಕೆನಡಾದಲ್ಲಿನ ಭಾರತದ ಹೈಕಮಿಷನ್, ಕಾನ್ಸುಲೇಟ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಕೆಲವು ತೀವ್ರಗಾಮಿಗಳಿಗೆ ಉತ್ತೇಜನ ನೀಡಿತ್ತು’ ಎಂದೂ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನೀಡಿದ್ದ ಹೇಳಿಕೆಗೆ ಕೆನಡಾದ ಹೈಕಮಿಷನರ್ ಅವರಿಗೆ ಶುಕ್ರವಾರ ಸಮನ್ಸ್ ನೀಡಿದ ಭಾರತ, ರಾಜತಾಂತ್ರಿಕ ಪ್ರತಿಭಟನೆಯನ್ನು ದಾಖಲಿಸಿತು.</p>.<p>‘ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪವನ್ನು ಒಪ್ಪಲಾಗದು. ಈ ಧೋರಣೆ ಮುಂದುವರಿದಿದ್ದೇ ಆದಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂಬುದಾಗಿ ಕೆನಡಾ ಹೈಕಮಿಷನರ್ಗೆ ತಿಳಿಸಲಾಯಿತು’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<p>ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದ ಜಸ್ಟಿನ್ ಟ್ರುಡೊ, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಕೆನಡಾ ಸಮರ್ಥಿಸುತ್ತದೆ’ ಎಂದು ಹೇಳಿದ್ದರಲ್ಲದೇ, ದೆಹಲಿಯಲ್ಲಿನ ಪರಿಸ್ಥಿತಿ ಕಳವಳಕಾರಿ ಎಂದಿದ್ದರು.</p>.<p>‘ಪ್ರಧಾನಿ ಟ್ರುಡೊ ಸೇರಿದಂತೆ ಕೆಲವು ಮುಖಂಡರು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ನೀಡಿದ ಹೇಳಿಕೆಗಳು ಕೆನಡಾದಲ್ಲಿನ ಭಾರತದ ಹೈಕಮಿಷನ್, ಕಾನ್ಸುಲೇಟ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಕೆಲವು ತೀವ್ರಗಾಮಿಗಳಿಗೆ ಉತ್ತೇಜನ ನೀಡಿತ್ತು’ ಎಂದೂ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>