'ಪಾಕಿಸ್ತಾನದ ಹೈಕಮಿಷನ್ನ ಅಧಿಕಾರಿಯನ್ನು ಇಂದು ವಿದೇಶಾಂಗ ಸಚಿವಾಲಯ ಕರೆಸಿಕೊಂಡಿದೆ. ನ. 13 ರಂದು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಅನೇಕ ಕಡೆಗಳಲ್ಲಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿವೆ. ಇದರ ಪರಿಣಾಮವಾಗಿ ನಾಲ್ವರು ನಾಗರಿಕರು ಸಾವಿಗೀಡಾಗಿದ್ದರೆ, 19 ಮಂದಿ ಗಾಯಗೊಂಡಿದ್ದಾರೆ. ಈ ಬೆಳವಣಿಗೆ ಸಂಬಂಧ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟಿಸಿದೆ,' ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.