‘ಭಾರತವನ್ನು ಗುರಿಯಾಗಿಸಿಕೊಂಡು ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುವ ಉಗ್ರ ಸಂಘಟನೆಗಳಿಗೆ ಪಾಕಿಸ್ತಾನವು ನೆಲೆ ಕಲ್ಪಿಸಬಾರದು ಎಂಬುದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಭಾರತದ ಗಡಿಯೊಳಗೆ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯಲ್ಲಿ ಪ್ರತಿಭಟನೆ ದಾಖಲಿಸಲಾಗಿದೆ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಹೇಳಿದೆ.