ನವದೆಹಲಿ: ‘ಭಾರತವು 2023ರ ವೇಳೆಗೆ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ’ ಎಂದುರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.
‘ರಸಗೊಬ್ಬರ ಆಮದು ಕಡಿತಗೊಳಿಸಲು ‘ಆತ್ಮ ನಿರ್ಭರ್ ಭಾರತ್’ ಕಾರ್ಯಕ್ರಮದಡಿ ದೇಶದಲ್ಲಿ ₹ 40 ಸಾವಿರ ಕೋಟಿ ಹೂಡಿಕೆ ಮಾಡಿ ರಸಗೊಬ್ಬರ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.
ಕರ್ನಾಟಕದ ರೈತರಿಗಾಗಿ ಇಫ್ಕೊ ಆಯೋಜಿಸಿದ್ದ ‘ಸ್ವಾವಲಂಬಿ ಭಾರತ ಮತ್ತು ಸುಸ್ಥಿರ ಕೃಷಿ’ ವೆಬ್ನಾರ್ನಲ್ಲಿ ಅವರು ಮಾತನಾಡಿದರು.
‘ಸ್ಥಳೀಯ ಕೈಗಾರಿಕೆಗಳನ್ನು ಉತ್ತೇಜಿಸಲು ಎಲ್ಲಾ ರಸಗೊಬ್ಬರ ಕಂಪನಿಗಳನ್ನು ಅನಿಲ ಆಧಾರಿತ ತಂತ್ರಜ್ಞಾನಕ್ಕೆ ಪರಿವರ್ತಿಸುತ್ತಿದ್ದೇವೆ. ಇತ್ತೀಚೆಗೆ ದೇಶದ ನಾಲ್ಕು ಯೂರಿಯಾ ಘಟಕಗಳನ್ನು ಪುನರುಜ್ಜೀವನಗೊಳಿಸಿದ್ದೇವೆ’ ಎಂದರು.