ಗುಜರಾತ್ನ ಬನಸ್ಕಾಂತ ಜಿಲ್ಲೆಯ ದಿಯೋದರ್ನಲ್ಲಿ ಬನಾಸ್ ಡೈರಿಯ ಹೊಸ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೆಹಲಿಯಿಂದ ಹೊರಟ ನಂತರ ಒಂದು ರೂಪಾಯಿಯಲ್ಲಿ ಕೇವಲ 15 ಪೈಸೆ ಮಾತ್ರ ಫಲಾನುಭವಿಗಳಿಗೆ ತಲುಪುತ್ತದೆ ಎಂದು ಮಾಜಿ ಪ್ರಧಾನಿಯೊಬ್ಬರು ಹೇಳುತ್ತಿದ್ದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಸಂಪೂರ್ಣ 100 ಪೈಸೆ ಉದ್ದೇಶಿತ ಫಲಾನುಭವಿಗಳಿಗೆ ತಲುಪುತ್ತಿದೆ ಮತ್ತು ರೈತರ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತಿದೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಟೀಕಿಸಿದರು.