ಬಹು ಪಕ್ಷಗಳಿಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವುದರಿಂದ ಬಹುಮತ ದೊರೆಯದೇ ಅಸ್ಥಿರ ರಾಜಕೀಯ ಸ್ಥಿತಿ ಉಂಟಾಗಿ, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳಿವೆ. ಇದರಿಂದ ರಾಜಕೀಯ ಮುಖಂಡರಲ್ಲಿನ ಭಿನ್ನಾಭಿಪ್ರಾಯದ ಸಂದರ್ಭ ಸರ್ಕಾರ ಅಸ್ಥಿರತೆಯನ್ನೂ ಎದುರಿಸುವ ಸಂದರ್ಭ ಒದಗಿ, ಅವಧಿಪೂರ್ವ ಚುನಾವಣೆ ಎದುರಿಸಬೇಕಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.