<p><strong>ಗುವಾಹಟಿ:</strong>ಗಡಿಯಾಚೆಯಿಂದ ದೇಶವನ್ನು ಗುರಿಯಾಗಿಸುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಹಿಂಜರಿಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ತಿಳಿಸಿದರು.</p>.<p>ಭಾರತ– ಪಾಕಿಸ್ತಾನ ಯುದ್ಧದಲ್ಲಿ (1971) ಪಾಲ್ಗೊಂಡಿದ್ದ ಅಸ್ಸಾಂ ಮೂಲದ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಿಂದ ಭಯೋತ್ಪಾದನೆಯನ್ನು ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದರು.</p>.<p>‘ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲಾಗುವುದು ಎಂಬ ಸಂದೇಶವನ್ನು ನೀಡುವಲ್ಲಿ ಭಾರತ ಯಶಸ್ವಿಯಾಗಿದೆ. ಗಡಿಯಾಚೆಯಿಂದ ದೇಶವನ್ನು ಗುರಿಯಾಗಿಸಿಕೊಂಡರೆ, ನಾವು ಗಡಿ ದಾಟಲು ಹಿಂಜರಿಯುವುದಿಲ್ಲ’ ಎಂದು ಅವರು ಎಚ್ಚರಿಸಿದರು.</p>.<p>‘ಪಶ್ಚಿಮ ಗಡಿಗೆ ಹೋಲಿಸಿದರೆ ದೇಶದ ಪೂರ್ವ ಗಡಿ ಭಾಗ ಪ್ರಸ್ತುತ ಹೆಚ್ಚು ಶಾಂತಿ ಮತ್ತು ಸ್ಥಿರತೆಯನ್ನು ಅನುಭವಿಸುತ್ತಿದೆ. ಬಾಂಗ್ಲಾದೇಶವು ಸ್ನೇಹಪರ ನೆರೆಯ ರಾಷ್ಟ್ರವಾಗಿದೆ. ಹೀಗಾಗಿ ಇಲ್ಲಿ ಒಳನುಸುಳುವಿಕೆಯು ಬಹುತೇಕ ಅಂತ್ಯವಾಗಿದೆ’ ಎಂದು ಸಿಂಗ್ ತಿಳಿಸಿದರು.</p>.<p>ಈಶಾನ್ಯದ ವಿವಿಧ ಭಾಗಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯನ್ನು ಇತ್ತೀಚೆಗೆ ಹಿಂತೆಗೆದುಕೊಂಡ ಕುರಿತು ಮಾತನಾಡಿದ ಅವರು,ಪರಿಸ್ಥಿತಿ ಸುಧಾರಿಸಿದ ಪ್ರದೇಶಗಳಲ್ಲಿ ಸರ್ಕಾರವು ಈ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.</p>.<p>ಸೇನೆಯು ಈ ಕಾಯ್ದೆ ಯಾವಾಗಲೂ ಜಾರಿಯಲ್ಲಿ ಇರಬೇಕು ಎಂದು ಬಯಸುತ್ತದೆ ಎಂಬ ತಪ್ಪು ಗ್ರಹಿಕೆ ಸಾರ್ವಜನಿಕರಲ್ಲಿ ಇದೆ. ಆದರೆ ಪರಿಸ್ಥಿತಿಯನ್ನು ಆಧರಿಸಿ ಈ ರೀತಿಯ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತದೆಯೇ ಹೊರತು ಸೇನೆಯ ಕಾರಣಕ್ಕಲ್ಲ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong>ಗಡಿಯಾಚೆಯಿಂದ ದೇಶವನ್ನು ಗುರಿಯಾಗಿಸುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಹಿಂಜರಿಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ತಿಳಿಸಿದರು.</p>.<p>ಭಾರತ– ಪಾಕಿಸ್ತಾನ ಯುದ್ಧದಲ್ಲಿ (1971) ಪಾಲ್ಗೊಂಡಿದ್ದ ಅಸ್ಸಾಂ ಮೂಲದ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಿಂದ ಭಯೋತ್ಪಾದನೆಯನ್ನು ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದರು.</p>.<p>‘ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲಾಗುವುದು ಎಂಬ ಸಂದೇಶವನ್ನು ನೀಡುವಲ್ಲಿ ಭಾರತ ಯಶಸ್ವಿಯಾಗಿದೆ. ಗಡಿಯಾಚೆಯಿಂದ ದೇಶವನ್ನು ಗುರಿಯಾಗಿಸಿಕೊಂಡರೆ, ನಾವು ಗಡಿ ದಾಟಲು ಹಿಂಜರಿಯುವುದಿಲ್ಲ’ ಎಂದು ಅವರು ಎಚ್ಚರಿಸಿದರು.</p>.<p>‘ಪಶ್ಚಿಮ ಗಡಿಗೆ ಹೋಲಿಸಿದರೆ ದೇಶದ ಪೂರ್ವ ಗಡಿ ಭಾಗ ಪ್ರಸ್ತುತ ಹೆಚ್ಚು ಶಾಂತಿ ಮತ್ತು ಸ್ಥಿರತೆಯನ್ನು ಅನುಭವಿಸುತ್ತಿದೆ. ಬಾಂಗ್ಲಾದೇಶವು ಸ್ನೇಹಪರ ನೆರೆಯ ರಾಷ್ಟ್ರವಾಗಿದೆ. ಹೀಗಾಗಿ ಇಲ್ಲಿ ಒಳನುಸುಳುವಿಕೆಯು ಬಹುತೇಕ ಅಂತ್ಯವಾಗಿದೆ’ ಎಂದು ಸಿಂಗ್ ತಿಳಿಸಿದರು.</p>.<p>ಈಶಾನ್ಯದ ವಿವಿಧ ಭಾಗಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯನ್ನು ಇತ್ತೀಚೆಗೆ ಹಿಂತೆಗೆದುಕೊಂಡ ಕುರಿತು ಮಾತನಾಡಿದ ಅವರು,ಪರಿಸ್ಥಿತಿ ಸುಧಾರಿಸಿದ ಪ್ರದೇಶಗಳಲ್ಲಿ ಸರ್ಕಾರವು ಈ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.</p>.<p>ಸೇನೆಯು ಈ ಕಾಯ್ದೆ ಯಾವಾಗಲೂ ಜಾರಿಯಲ್ಲಿ ಇರಬೇಕು ಎಂದು ಬಯಸುತ್ತದೆ ಎಂಬ ತಪ್ಪು ಗ್ರಹಿಕೆ ಸಾರ್ವಜನಿಕರಲ್ಲಿ ಇದೆ. ಆದರೆ ಪರಿಸ್ಥಿತಿಯನ್ನು ಆಧರಿಸಿ ಈ ರೀತಿಯ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತದೆಯೇ ಹೊರತು ಸೇನೆಯ ಕಾರಣಕ್ಕಲ್ಲ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>