ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತದ ತನಿಖೆಗೆ ಭಾರತೀಯ ವಾಯುಪಡೆ (ಐಎಎಫ್) ಆದೇಶಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದರು.
ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.
Air Marshal Manvendra Singh is heading the tri-services inquiry into the IAF Mi-17 that crashed yesterday. Singh is Commander of Indian Air Force’s training command and a helicopter pilot himself: IAF Officials pic.twitter.com/tzOBlxB6oF
ಐಎಎಫ್ ತನಿಖಾ ತಂಡ ಬುಧವಾರ ವೆಲ್ಲಿಂಗ್ಟನ್ ತಲುಪಿದ್ದು, ಈಗಾಗಲೇ ತನಿಖೆ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.
ಜನರಲ್ ರಾವತ್ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಂಸತ್ತಿಗೆ ತಿಳಿಸಿದ ರಾಜನಾಥ್, ಇತರ ಸೇನಾ ಸಿಬ್ಬಂದಿಯ ಅಂತಿಮ ಸಂಸ್ಕಾರವನ್ನು ಸೂಕ್ತ ಗೌರವದೊಂದಿಗೆ ನಡೆಸುವುದಾಗಿ ಹೇಳಿದರು.
ಬುಧವಾರ ನಡೆದ ಎಂಐ–17ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದರು. ಎಲ್ಲರ ನಿಧನಕ್ಕೆ ಲೋಕಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.