‘ಅನಾರೋಗ್ಯ ಪೀಡಿತ ಯೋಧರೊಬ್ಬರನ್ನು ಕರೆತರುವ ಸಲುವಾಗಿ ತೆರಳುತ್ತಿದ್ದ ವೇಳೆ ತುಲೈಲ್ ಸೆಕ್ಟರ್ನ ಬರೂಬ್ ಪ್ರದೇಶದ ಗುಜ್ರಾನ್ ಎಂಬಲ್ಲಿ ಹೆಲಿಕಾಪ್ಟರ್ ಸಂಪರ್ಕ ಕಡಿದುಕೊಂಡಿತು. ತಕ್ಷಣ ರಕ್ಷಣಾ ಹೆಲಿಕಾಪ್ಟರ್ ಬಳಸಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಹಿಮಚ್ಛಾದಿತ ಗುಜ್ರಾನ್ ನಲ್ಹಾ ಪ್ರದೇಶದಲ್ಲಿ ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಯಿತು. ಪೈಲಟ್ ಹಾಗೂ ಸಹ ಪೈಲಟ್ ಅವರನ್ನು ತಕ್ಷಣವೇ ಉಧಂಪುರದ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯಗೊಂಡಿದ್ದ ಸಂಕಲ್ಪ ಯಾದವ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಮತ್ತೊಬ್ಬ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ’ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ಎಮ್ರಾನ್ ಮುಸಾಗಿ ತಿಳಿಸಿದರು.