<p><strong>ನವದೆಹಲಿ:</strong> ಗಾಲ್ವನ್ ಕಣಿವೆಯಲ್ಲಿ ಚೀನಾ ಪಡೆಗಳ ಎದುರು ದಿಟ್ಟ ಹೋರಾಟ ನಡೆಸಿದ ಭಾರತೀಯ ಯೋಧರಿಗೆ ಭಾರತೀಯ ಸೇನೆಯು ಮಂಗಳವಾರ ವಿಶೇಷ ಗೀತೆಯ ಮೂಲಕ ನಮನ ಸಲ್ಲಿಸಿದೆ.</p>.<p>'ಗಾಲ್ವನ್ ಕೆ ವೀರ್' ಹೆಸರಿನಲ್ಲಿ ಗಾಲ್ವನ್ ವೀರ ಯೋಧರಿಗೆ ಗಾಯಕ ಹರಿಹರನ್ ಗೀತ ನಮನ ಸಲ್ಲಿಸಿದ್ದಾರೆ. ಕಳೆದ ವರ್ಷ ಜೂನ್ 15ರಂದು<a href="https://www.prajavani.net/tags/galwan-valley" target="_blank"> ಗಾಲ್ವನ್ ಘರ್ಷಣೆ</a> ನಡೆದಿತ್ತು. ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದರು.</p>.<p>ಅತ್ಯಂತ ಕಠಿಣ ಪರಿಸ್ಥಿತಿ, ಕಡಿದಾದ ಪ್ರದೇಶಗಳು ಹಾಗೂ ಪರ್ವತ ಪ್ರದೇಶಗಳಲ್ಲಿ ದೇಶದ ರಕ್ಷಣೆಗಾಗಿ ಸವಾಲುಗಳನ್ನು ಮೀರಿ ಮುನ್ನಡೆಯುವ ಸೈನಿಕರ 'ಸಾಹಸ ಯಾತ್ರೆ' ವಿಡಿಯೊದಲ್ಲಿ ದಾಖಲಾಗಿದೆ. 4ನಿಮಿಷ 59 ಸೆಕೆಂಡ್ಗಳಿರುವ ವಿಡಿಯೊವನ್ನು ಭಾರತೀಯ ಸೇನೆಯ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.</p>.<p>ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ, ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಯಿತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/galwan-valley-clash-india-china-border-dispute-a-year-after-galwan-clashes-india-better-prepared-to-839061.html" target="_blank">ಚೀನಾ ಗಡಿ ತಂಟೆ: ಗಾಲ್ವನ್ ಕಣಿವೆ ಸಂಘರ್ಷ, ಯೋಧರ ಬಲಿದಾನಕ್ಕೆ ವರ್ಷ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಾಲ್ವನ್ ಕಣಿವೆಯಲ್ಲಿ ಚೀನಾ ಪಡೆಗಳ ಎದುರು ದಿಟ್ಟ ಹೋರಾಟ ನಡೆಸಿದ ಭಾರತೀಯ ಯೋಧರಿಗೆ ಭಾರತೀಯ ಸೇನೆಯು ಮಂಗಳವಾರ ವಿಶೇಷ ಗೀತೆಯ ಮೂಲಕ ನಮನ ಸಲ್ಲಿಸಿದೆ.</p>.<p>'ಗಾಲ್ವನ್ ಕೆ ವೀರ್' ಹೆಸರಿನಲ್ಲಿ ಗಾಲ್ವನ್ ವೀರ ಯೋಧರಿಗೆ ಗಾಯಕ ಹರಿಹರನ್ ಗೀತ ನಮನ ಸಲ್ಲಿಸಿದ್ದಾರೆ. ಕಳೆದ ವರ್ಷ ಜೂನ್ 15ರಂದು<a href="https://www.prajavani.net/tags/galwan-valley" target="_blank"> ಗಾಲ್ವನ್ ಘರ್ಷಣೆ</a> ನಡೆದಿತ್ತು. ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದರು.</p>.<p>ಅತ್ಯಂತ ಕಠಿಣ ಪರಿಸ್ಥಿತಿ, ಕಡಿದಾದ ಪ್ರದೇಶಗಳು ಹಾಗೂ ಪರ್ವತ ಪ್ರದೇಶಗಳಲ್ಲಿ ದೇಶದ ರಕ್ಷಣೆಗಾಗಿ ಸವಾಲುಗಳನ್ನು ಮೀರಿ ಮುನ್ನಡೆಯುವ ಸೈನಿಕರ 'ಸಾಹಸ ಯಾತ್ರೆ' ವಿಡಿಯೊದಲ್ಲಿ ದಾಖಲಾಗಿದೆ. 4ನಿಮಿಷ 59 ಸೆಕೆಂಡ್ಗಳಿರುವ ವಿಡಿಯೊವನ್ನು ಭಾರತೀಯ ಸೇನೆಯ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.</p>.<p>ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ, ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಯಿತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/galwan-valley-clash-india-china-border-dispute-a-year-after-galwan-clashes-india-better-prepared-to-839061.html" target="_blank">ಚೀನಾ ಗಡಿ ತಂಟೆ: ಗಾಲ್ವನ್ ಕಣಿವೆ ಸಂಘರ್ಷ, ಯೋಧರ ಬಲಿದಾನಕ್ಕೆ ವರ್ಷ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>