'ಗಾಲ್ವನ್ ವೀರರಿಗೆ' ಗೀತ ನಮನ: ಸೇನೆಯಿಂದ ವಿಶೇಷ ವಿಡಿಯೊ ಬಿಡುಗಡೆ

ನವದೆಹಲಿ: ಗಾಲ್ವನ್ ಕಣಿವೆಯಲ್ಲಿ ಚೀನಾ ಪಡೆಗಳ ಎದುರು ದಿಟ್ಟ ಹೋರಾಟ ನಡೆಸಿದ ಭಾರತೀಯ ಯೋಧರಿಗೆ ಭಾರತೀಯ ಸೇನೆಯು ಮಂಗಳವಾರ ವಿಶೇಷ ಗೀತೆಯ ಮೂಲಕ ನಮನ ಸಲ್ಲಿಸಿದೆ.
'ಗಾಲ್ವನ್ ಕೆ ವೀರ್' ಹೆಸರಿನಲ್ಲಿ ಗಾಲ್ವನ್ ವೀರ ಯೋಧರಿಗೆ ಗಾಯಕ ಹರಿಹರನ್ ಗೀತ ನಮನ ಸಲ್ಲಿಸಿದ್ದಾರೆ. ಕಳೆದ ವರ್ಷ ಜೂನ್ 15ರಂದು ಗಾಲ್ವನ್ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದರು.
ಅತ್ಯಂತ ಕಠಿಣ ಪರಿಸ್ಥಿತಿ, ಕಡಿದಾದ ಪ್ರದೇಶಗಳು ಹಾಗೂ ಪರ್ವತ ಪ್ರದೇಶಗಳಲ್ಲಿ ದೇಶದ ರಕ್ಷಣೆಗಾಗಿ ಸವಾಲುಗಳನ್ನು ಮೀರಿ ಮುನ್ನಡೆಯುವ ಸೈನಿಕರ 'ಸಾಹಸ ಯಾತ್ರೆ' ವಿಡಿಯೊದಲ್ಲಿ ದಾಖಲಾಗಿದೆ. 4ನಿಮಿಷ 59 ಸೆಕೆಂಡ್ಗಳಿರುವ ವಿಡಿಯೊವನ್ನು ಭಾರತೀಯ ಸೇನೆಯ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.
“ मुझे तोड़ लेना वनमाली!
उस पथ पर देना तुम फेंक,
मातृभूमि पर शीश चढ़ाने
जिस पथ जावें वीर अनेक ”#IndianArmy#StrongAndCapable pic.twitter.com/EUvxvBNH5W— ADG PI - INDIAN ARMY (@adgpi) June 15, 2021
ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ, ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಯಿತು.
ಇದನ್ನೂ ಓದಿ... ಚೀನಾ ಗಡಿ ತಂಟೆ: ಗಾಲ್ವನ್ ಕಣಿವೆ ಸಂಘರ್ಷ, ಯೋಧರ ಬಲಿದಾನಕ್ಕೆ ವರ್ಷ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.