‘ದ್ವಿಪಕ್ಷೀಯ ಒಪ್ಪಂದದ ಪ್ರಕಾರ ವಾಸ್ತವ ನಿಯಂತ್ರಣ ರೇಖೆಯಿಂದ(ಎಲ್ಎಸಿ) ಆದಷ್ಟು ಶೀಘ್ರದಲ್ಲೇ ಎರಡೂ ರಾಷ್ಟ್ರಗಳ ಸೇನಾ ಸಿಬ್ಬಂದಿ ಸಂಪೂರ್ಣವಾಗಿ ಹಿಂದೆ ಸರಿಯುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ’ ಎಂದು ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ. ಗಡಿ ಬಿಕ್ಕಟ್ಟು ಶಮನಕ್ಕೆ ಸಚಿವರು ಹಾಗೂ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ಇಲ್ಲಿಯವರೆಗೂ ಯಾವುದೇ ದೃಢವಾದ ನಿಲುವು ವ್ಯಕ್ತವಾಗಿಲ್ಲ.