— Indian Cricketers' Association (@IndCricketAssoc) February 22, 2022
ಕ್ರಿಕೆಟ್ ಮತ್ತು ಆಟಗಾರರ ಬೆಳವಣಿಗೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಪಾತ್ರ ವಹಿಸಿವೆ. ಆದರೆ, ಯಾರು ತಮ್ಮ ಪರಿಮಿತಿಗಳನ್ನು ಮೀರಬಾರದು. ವೃದ್ಧಿಮಾನ್ ಸಹಾ ಅವರ ವಿಚಾರದಲ್ಲಿ ಆಗಿರುವ ಘಟನೆ ಒಪ್ಪುವಂಥದ್ದಲ್ಲ. ಪತ್ರಕರ್ತರ ಸಂಘಟನೆಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು.
‘ತಪ್ಪು ಮಾಡಿದ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ, ಬಿಸಿಸಿಐನ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರಾಕರಿಸುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದ್ದೇ ಆದರೆ, ಸಂಸ್ಥೆಯು ಅದನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ‘ ಎಂದು ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಸಂಸ್ಥೆಯು ವೃದ್ಧಿಮಾನ್ ಸಹಾ ಅವರ ಪರವಾಗಿ ನಿಲ್ಲಲಿದೆ ಎಂದೂ ಅವರು ತಿಳಿಸಿದ್ದಾರೆ.
ಸಂದರ್ಶನ ನೀಡಲು ನಿರಾಕರಿಸಿದ ನಂತರ ‘ಗೌರವಾನ್ವಿತ’ ಪತ್ರಕರ್ತರೊಬ್ಬರು ಜೋರುಧ್ವನಿಯಲ್ಲಿ ಬೆದರಿಕೆ ಒಡ್ಡಿದ್ದಾರೆ ಎಂದು ಸಹಾ ಟ್ವಿಟರ್ನಲ್ಲಿ ಆರೋಪಿಸಿದ್ದರು.