<p><strong>ನವದೆಹಲಿ: </strong>ದೆಹಲಿಯ ರಾಜ್ಪತ್ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿರುವಾಗಲೇ ದೆಹಲಿ ಪ್ರವೇಶಿಸಲು ಮುಂದಾದ ಸಾವಿರಾರು ರೈತರನ್ನು ನಿಯಂತ್ರಿಸಲು ಪೊಲೀಸರು ಅಶ್ರವಾಯು ಪ್ರಯೋಗಿಸಿದರು.</p>.<p>ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿ ರುವ ಗಣರಾಜ್ಯೋತ್ಸವದ ದಿನದಂದು (ಮಂಗಳವಾರ) ಟ್ರ್ಯಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದ್ದರು. ಕೆಲವೊಂದು ನಿರ್ಬಂಧಗಳ ಜತೆಗೆ, ರಾಜ್ಪತ್ನಲ್ಲಿ ಕಾರ್ಯಕ್ರಮಗಳು ಮಗಿದ ಮೇಲೆ, ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಿದ್ದರು.</p>.<p>ಆದರೆ, ಕೆಲವು ರೈತರ ಗುಂಪುಗಳು ರಾಜ್ಪತ್ನಲ್ಲಿ ಕಾರ್ಯಕ್ರಮಗಳು ನಡೆಯುತ್ತಿರುವ ವೇಳೆಯಲ್ಲಿ ದೆಹಲಿಯಲ್ಲಿ ಕಾಲ್ನಡಿಗೆ ಮೂಲಕ ದೆಹಲಿ ಪ್ರವೇಶಕ್ಕೆ ಮುಂದಾದರು. ಇನ್ನಷ್ಟು ರೈತರು ಟ್ರ್ಯಾಕ್ಟರ್ಗಳ ಮೂಲಕ ದೆಹಲಿಯ ರಸ್ತೆಗಳಲ್ಲಿ ಸಂಚರಿಸಿದರು.</p>.<p>ಬ್ಯಾರಿಕೇಡ್ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದ ರೈತರನ್ನು ಚದುರಿಸಲು ಪೊಲೀಸರು ಪ್ರತಿಭಟನಾ ನಿರತರ ಮೇಲೆ ರೈತರು ಅಶ್ರವಾಯು ಪ್ರಯೋಗಿಸಿದರು. ಪೊಲೀಸರ ಎಲ್ಲ ಅಡೆತಡೆಗಳನ್ನು ದಾಟಿ ಪ್ರತಿಭಟನಾಕಾರರು ದೆಹಲಿ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿಯ ರಾಜ್ಪತ್ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿರುವಾಗಲೇ ದೆಹಲಿ ಪ್ರವೇಶಿಸಲು ಮುಂದಾದ ಸಾವಿರಾರು ರೈತರನ್ನು ನಿಯಂತ್ರಿಸಲು ಪೊಲೀಸರು ಅಶ್ರವಾಯು ಪ್ರಯೋಗಿಸಿದರು.</p>.<p>ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿ ರುವ ಗಣರಾಜ್ಯೋತ್ಸವದ ದಿನದಂದು (ಮಂಗಳವಾರ) ಟ್ರ್ಯಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದ್ದರು. ಕೆಲವೊಂದು ನಿರ್ಬಂಧಗಳ ಜತೆಗೆ, ರಾಜ್ಪತ್ನಲ್ಲಿ ಕಾರ್ಯಕ್ರಮಗಳು ಮಗಿದ ಮೇಲೆ, ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಿದ್ದರು.</p>.<p>ಆದರೆ, ಕೆಲವು ರೈತರ ಗುಂಪುಗಳು ರಾಜ್ಪತ್ನಲ್ಲಿ ಕಾರ್ಯಕ್ರಮಗಳು ನಡೆಯುತ್ತಿರುವ ವೇಳೆಯಲ್ಲಿ ದೆಹಲಿಯಲ್ಲಿ ಕಾಲ್ನಡಿಗೆ ಮೂಲಕ ದೆಹಲಿ ಪ್ರವೇಶಕ್ಕೆ ಮುಂದಾದರು. ಇನ್ನಷ್ಟು ರೈತರು ಟ್ರ್ಯಾಕ್ಟರ್ಗಳ ಮೂಲಕ ದೆಹಲಿಯ ರಸ್ತೆಗಳಲ್ಲಿ ಸಂಚರಿಸಿದರು.</p>.<p>ಬ್ಯಾರಿಕೇಡ್ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದ ರೈತರನ್ನು ಚದುರಿಸಲು ಪೊಲೀಸರು ಪ್ರತಿಭಟನಾ ನಿರತರ ಮೇಲೆ ರೈತರು ಅಶ್ರವಾಯು ಪ್ರಯೋಗಿಸಿದರು. ಪೊಲೀಸರ ಎಲ್ಲ ಅಡೆತಡೆಗಳನ್ನು ದಾಟಿ ಪ್ರತಿಭಟನಾಕಾರರು ದೆಹಲಿ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>