<p><strong>ಮುಂಬೈ: </strong>ಕೊರೊನಾ ನಿಯಂತ್ರಣದ ವಿಚಾರದಲ್ಲಿ ಗೊಂದಲದಲ್ಲಿರುವ ಸರ್ಕಾರ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತಿಸುವ ಬದಲು, ಇಲ್ಲಿಯವರೆಗೆ ತಾನು ಕೈಗೊಂಡಿರುವ ಕಾರ್ಯಗಳಿಗೆ ಮನ್ನಣೆಗಳಿಸುವತ್ತ ಗಮನ ಹರಿಸಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ಸಂಜೆ ರಾಷ್ಟ್ರೀಯ ಸೇವಾ ದಳ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಔಷಧ ಉತ್ಪಾದನೆಯಲ್ಲಿ ಉತ್ತಮ ಸ್ಥಾನದಲ್ಲಿರುವುದು ಹಾಗೂ ದೇಶದ ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವ ಕಾರಣ ಕೊರೊನಾ ನಿಯಂತ್ರಣ ವಿಚಾರದಲ್ಲಿ ಭಾರತ ಇದ್ದಿದ್ದರಲ್ಲಿ ಉತ್ತಮ ಸ್ಥಾನದಲ್ಲಿದೆ‘ ಎಂದರು.</p>.<p>‘ಕೋವಿಡ್ ನಿರ್ವಹಣೆ ಕುರಿತು ಸರ್ಕಾರ ಗೊಂದಲದಲ್ಲಿರುವ ಕಾರಣ, ಭಾರತ ತನ್ನ ಸಾಮರ್ಥ್ಯದ ಮೇಲೆ ಕೋವಿಡ್ ಬಿಕ್ಕಟ್ಟನ್ನು ಸಮಪರ್ಕವಾಗಿ ಎದುರಿಸಲು ಸಾಧ್ಯವಿಲ್ಲ’ ಎಂದು ಸೇನ್ ಅಭಿಪ್ರಾಯಪಟ್ಟರು.</p>.<p>‘ಸರ್ಕಾರ ದೇಶದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ಕೈಗೊಳ್ಳುವುದಕ್ಕಿಂತ ಹೆಚ್ಚಾಗಿ, ತಾನು ಮಾಡಿರುವ ಕಾರ್ಯಗಳಿಗೆ ಮನ್ನಣೆ ಪಡೆಯುವಲ್ಲಿ ಹೆಚ್ಚು ಉತ್ಸುಕವಾಗಿದೆ. ಪರಿಣಾಮವಾಗಿ, ದೇಶ ಒಂದು ರೀತಿಯ ಮನೋವ್ಯಾಧಿಯಿಂದ (ಸ್ಕಿಜೋಫ್ರೇನಿಯಾ) ಬಳಲುತ್ತಿದೆ’ ಎಂದು ಸೇನ್ ಹೇಳಿದರು.</p>.<p>ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದಾಗಿ ದೇಶದಲ್ಲಿ ನಿತ್ಯ 4 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗುತ್ತಿದೆ. ಅಲ್ಲದೆ ಪ್ರತಿ ದಿನ 4,500ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸೇನ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.</p>.<p>ಕೆಲವು ತಜ್ಞರು, ಕಳೆದ ವರ್ಷ ‘ಕೊರೊನಾವನ್ನು ಗೆದ್ದೆವು‘ ಎಂದು ವಿಯೋತ್ಸವ ಆಚರಿಸಿದ್ದೂ ಎರಡನೇ ಅಲೆಯಲ್ಲಿ ಈ ಪ್ರಮಾಣದ ಸಮಸ್ಯೆ ಎದುರಾಗಲು ಕಾರಣವಾಯಿತು ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/himachal-pradesh-bjp-mla-narinder-bragta-dies-of-covid-19-836169.html" target="_blank">ಕೋವಿಡ್: ಹಿಮಾಚಲ ಪ್ರದೇಶದ ಬಿಜೆಪಿ ಶಾಸಕ ನರೀಂದರ್ ಬರಾಗಟಾ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಕೊರೊನಾ ನಿಯಂತ್ರಣದ ವಿಚಾರದಲ್ಲಿ ಗೊಂದಲದಲ್ಲಿರುವ ಸರ್ಕಾರ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತಿಸುವ ಬದಲು, ಇಲ್ಲಿಯವರೆಗೆ ತಾನು ಕೈಗೊಂಡಿರುವ ಕಾರ್ಯಗಳಿಗೆ ಮನ್ನಣೆಗಳಿಸುವತ್ತ ಗಮನ ಹರಿಸಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ಸಂಜೆ ರಾಷ್ಟ್ರೀಯ ಸೇವಾ ದಳ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಔಷಧ ಉತ್ಪಾದನೆಯಲ್ಲಿ ಉತ್ತಮ ಸ್ಥಾನದಲ್ಲಿರುವುದು ಹಾಗೂ ದೇಶದ ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವ ಕಾರಣ ಕೊರೊನಾ ನಿಯಂತ್ರಣ ವಿಚಾರದಲ್ಲಿ ಭಾರತ ಇದ್ದಿದ್ದರಲ್ಲಿ ಉತ್ತಮ ಸ್ಥಾನದಲ್ಲಿದೆ‘ ಎಂದರು.</p>.<p>‘ಕೋವಿಡ್ ನಿರ್ವಹಣೆ ಕುರಿತು ಸರ್ಕಾರ ಗೊಂದಲದಲ್ಲಿರುವ ಕಾರಣ, ಭಾರತ ತನ್ನ ಸಾಮರ್ಥ್ಯದ ಮೇಲೆ ಕೋವಿಡ್ ಬಿಕ್ಕಟ್ಟನ್ನು ಸಮಪರ್ಕವಾಗಿ ಎದುರಿಸಲು ಸಾಧ್ಯವಿಲ್ಲ’ ಎಂದು ಸೇನ್ ಅಭಿಪ್ರಾಯಪಟ್ಟರು.</p>.<p>‘ಸರ್ಕಾರ ದೇಶದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ಕೈಗೊಳ್ಳುವುದಕ್ಕಿಂತ ಹೆಚ್ಚಾಗಿ, ತಾನು ಮಾಡಿರುವ ಕಾರ್ಯಗಳಿಗೆ ಮನ್ನಣೆ ಪಡೆಯುವಲ್ಲಿ ಹೆಚ್ಚು ಉತ್ಸುಕವಾಗಿದೆ. ಪರಿಣಾಮವಾಗಿ, ದೇಶ ಒಂದು ರೀತಿಯ ಮನೋವ್ಯಾಧಿಯಿಂದ (ಸ್ಕಿಜೋಫ್ರೇನಿಯಾ) ಬಳಲುತ್ತಿದೆ’ ಎಂದು ಸೇನ್ ಹೇಳಿದರು.</p>.<p>ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದಾಗಿ ದೇಶದಲ್ಲಿ ನಿತ್ಯ 4 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗುತ್ತಿದೆ. ಅಲ್ಲದೆ ಪ್ರತಿ ದಿನ 4,500ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸೇನ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.</p>.<p>ಕೆಲವು ತಜ್ಞರು, ಕಳೆದ ವರ್ಷ ‘ಕೊರೊನಾವನ್ನು ಗೆದ್ದೆವು‘ ಎಂದು ವಿಯೋತ್ಸವ ಆಚರಿಸಿದ್ದೂ ಎರಡನೇ ಅಲೆಯಲ್ಲಿ ಈ ಪ್ರಮಾಣದ ಸಮಸ್ಯೆ ಎದುರಾಗಲು ಕಾರಣವಾಯಿತು ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/himachal-pradesh-bjp-mla-narinder-bragta-dies-of-covid-19-836169.html" target="_blank">ಕೋವಿಡ್: ಹಿಮಾಚಲ ಪ್ರದೇಶದ ಬಿಜೆಪಿ ಶಾಸಕ ನರೀಂದರ್ ಬರಾಗಟಾ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>