<p class="title"><strong>ಮಲಪ್ಪುರ (ಕೇರಳ):</strong>ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ವಿದ್ಯಾರ್ಥಿಯೊಬ್ಬರು ವಿ.ಡಿ. ಸಾವರ್ಕರ್ ವೇಷತೊಟ್ಟಿದ್ದರು ಎಂದು ಆರೋಪಿಸಿ ಹಲವು ಯುವ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು ಶಾಲೆ ಎದುರು ಪ್ರತಿಭಟನೆಯನ್ನೂ ನಡೆಸಿವೆ.</p>.<p>ಕೀಜೂಪರಂಬಾದಲ್ಲಿರುವ ಸರ್ಕಾರಿ ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆಯ ಮುಂದೆ ಯುವ ಕಾಂಗ್ರೆಸ್ ಮತ್ತು ಭಾರತೀಯ ಮುಸ್ಲಿಂ ಲೀಗ್ನ ಯುವ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗೆ ಸಾರ್ವಕರ್ ವೇಷತೊಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸ್ವಾತಂತ್ರ್ಯ ಹೋರಾಟಗಾರರಂತೆ ವೇಷತೊಟ್ಟ ಮಸುಕು ಮಾಡಲಾಗಿದ್ದ ಮಕ್ಕಳ ಚಿತ್ರಗಳನ್ನು ಸುದ್ದಿ ವಾಹಿನಿವೊಂದು ಪ್ರಸಾರ ಮಾಡಿತ್ತು. ಇದರಲ್ಲಿ ಸಾವರ್ಕರ್ ಹೆಸರನ್ನು ಬರೆದುಕೊಂಡು ಕೊರಳಿಗೆ ಹಾಕಿಕೊಂಡಿದ್ದ ವಿದ್ಯಾರ್ಥಿ ಚಿತ್ರವೂ ಇತ್ತು. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ನಂತರ ವಿವಾದ ಭುಗಿಲೆದ್ದಿತು.</p>.<p>ಈ ಚಿತ್ರಗಳು ಗ್ರೀನ್ ರೂಮ್ನಿಂದ ತೆಗೆದುಕೊಂಡದ್ದು. ವಿವಾದ ಆಗಬಹುದು ಎಂದು ಯೋಚಿಸಿ, ಮೆರವಣಿಗೆ ಹೊರಡುವುದಕ್ಕೆ ಮೊದಲೇ ಮಗುವಿನ ಕೊರಳಲ್ಲಿ ಇದ್ದ ಸಾವರ್ಕರ್ ಹೆಸರನ್ನು ತೆಗೆಯಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಶಾಲೆಯ ಅಧಿಕಾರಿಗಳು ಈ ವಿವಾದದ ಬಗ್ಗೆ ಈ ವರೆಗೆ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಲಪ್ಪುರ (ಕೇರಳ):</strong>ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ವಿದ್ಯಾರ್ಥಿಯೊಬ್ಬರು ವಿ.ಡಿ. ಸಾವರ್ಕರ್ ವೇಷತೊಟ್ಟಿದ್ದರು ಎಂದು ಆರೋಪಿಸಿ ಹಲವು ಯುವ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು ಶಾಲೆ ಎದುರು ಪ್ರತಿಭಟನೆಯನ್ನೂ ನಡೆಸಿವೆ.</p>.<p>ಕೀಜೂಪರಂಬಾದಲ್ಲಿರುವ ಸರ್ಕಾರಿ ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆಯ ಮುಂದೆ ಯುವ ಕಾಂಗ್ರೆಸ್ ಮತ್ತು ಭಾರತೀಯ ಮುಸ್ಲಿಂ ಲೀಗ್ನ ಯುವ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗೆ ಸಾರ್ವಕರ್ ವೇಷತೊಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸ್ವಾತಂತ್ರ್ಯ ಹೋರಾಟಗಾರರಂತೆ ವೇಷತೊಟ್ಟ ಮಸುಕು ಮಾಡಲಾಗಿದ್ದ ಮಕ್ಕಳ ಚಿತ್ರಗಳನ್ನು ಸುದ್ದಿ ವಾಹಿನಿವೊಂದು ಪ್ರಸಾರ ಮಾಡಿತ್ತು. ಇದರಲ್ಲಿ ಸಾವರ್ಕರ್ ಹೆಸರನ್ನು ಬರೆದುಕೊಂಡು ಕೊರಳಿಗೆ ಹಾಕಿಕೊಂಡಿದ್ದ ವಿದ್ಯಾರ್ಥಿ ಚಿತ್ರವೂ ಇತ್ತು. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ನಂತರ ವಿವಾದ ಭುಗಿಲೆದ್ದಿತು.</p>.<p>ಈ ಚಿತ್ರಗಳು ಗ್ರೀನ್ ರೂಮ್ನಿಂದ ತೆಗೆದುಕೊಂಡದ್ದು. ವಿವಾದ ಆಗಬಹುದು ಎಂದು ಯೋಚಿಸಿ, ಮೆರವಣಿಗೆ ಹೊರಡುವುದಕ್ಕೆ ಮೊದಲೇ ಮಗುವಿನ ಕೊರಳಲ್ಲಿ ಇದ್ದ ಸಾವರ್ಕರ್ ಹೆಸರನ್ನು ತೆಗೆಯಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಶಾಲೆಯ ಅಧಿಕಾರಿಗಳು ಈ ವಿವಾದದ ಬಗ್ಗೆ ಈ ವರೆಗೆ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>