<p class="title"><strong>ನವದೆಹಲಿ (ಪಿಟಿಐ): </strong>ಭಾರತೀಯ ಉದ್ಯಮ ಮತ್ತು ‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಜಾಗತಿಕ ಬೆಳವಣಿಗೆಗೆ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.</p>.<p class="title">ಗಣಪತಿ ಸಚ್ಚಿದಾನಂದ ಸ್ವಾಮಿಗಳ 80ನೇ ಜನ್ಮದಿನಾಚರಣೆ ಕುರಿತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೀಡಿದ ಸಂದೇಶದಲ್ಲಿ ಮೋದಿ ಅವರು, ಆಧುನಿಕತೆಯ ಜೊತೆಗೆ ದೇಶವು ತನ್ನ ಪ್ರಾಚೀನತೆಯನ್ನು ಸಂರಕ್ಷಿಸುತ್ತಿದೆ, ಉತ್ತೇಜಿಸುತ್ತಿದೆ ಮತ್ತು ಅದರ ನಾವೀನ್ಯತೆಯನ್ನು ಬಲಪಡಿಸುತ್ತಿದೆ ಎಂದು ಪ್ರತಿಪಾದಿಸಿದರು.</p>.<p>‘ಇಂದು ಭಾರತದ ಗುರುತು ಯೋಗ ಹಾಗೂ ಯುವಕರು. ಜಗತ್ತು ನಮ್ಮ ಸ್ಟಾರ್ಟ್ಅಪ್ಗಳನ್ನು ತನ್ನ ಭವಿಷ್ಯದಂತೆ ನೋಡುತ್ತಿದೆ. ನಮ್ಮ ಉದ್ಯಮ ಮತ್ತು ಮೇಕ್ ಇನ್ ಇಂಡಿಯಾ ಜಾಗತಿಕ ಬೆಳವಣಿಗೆಗೆ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ’ ಎಂದು ಪ್ರತಿಪಾದಿಸಿದ ಅವರು, ಈ ದಿಶೆಯಲ್ಲಿಯೂ ಆಧ್ಯಾತ್ಮಿಕ ಕೇಂದ್ರಗಳು ಸ್ಫೂರ್ತಿಯ ಕೇಂದ್ರಗಳಾಗಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಚ್ಚಿದಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳಿಗೆ ಮೋದಿ ನಮನ ಸಲ್ಲಿಸಿದರು. ಸಚ್ಚಿದಾನಂದ ಸ್ವಾಮಿಗಳು ಅವಧೂತ ದತ್ತಪೀಠವನ್ನು ಸ್ಥಾಪಿಸಿದ್ದು, ಇದು ಅಂತರರಾಷ್ಟ್ರೀಯ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಲ್ಯಾಣ ಸಂಸ್ಥೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ): </strong>ಭಾರತೀಯ ಉದ್ಯಮ ಮತ್ತು ‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಜಾಗತಿಕ ಬೆಳವಣಿಗೆಗೆ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.</p>.<p class="title">ಗಣಪತಿ ಸಚ್ಚಿದಾನಂದ ಸ್ವಾಮಿಗಳ 80ನೇ ಜನ್ಮದಿನಾಚರಣೆ ಕುರಿತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೀಡಿದ ಸಂದೇಶದಲ್ಲಿ ಮೋದಿ ಅವರು, ಆಧುನಿಕತೆಯ ಜೊತೆಗೆ ದೇಶವು ತನ್ನ ಪ್ರಾಚೀನತೆಯನ್ನು ಸಂರಕ್ಷಿಸುತ್ತಿದೆ, ಉತ್ತೇಜಿಸುತ್ತಿದೆ ಮತ್ತು ಅದರ ನಾವೀನ್ಯತೆಯನ್ನು ಬಲಪಡಿಸುತ್ತಿದೆ ಎಂದು ಪ್ರತಿಪಾದಿಸಿದರು.</p>.<p>‘ಇಂದು ಭಾರತದ ಗುರುತು ಯೋಗ ಹಾಗೂ ಯುವಕರು. ಜಗತ್ತು ನಮ್ಮ ಸ್ಟಾರ್ಟ್ಅಪ್ಗಳನ್ನು ತನ್ನ ಭವಿಷ್ಯದಂತೆ ನೋಡುತ್ತಿದೆ. ನಮ್ಮ ಉದ್ಯಮ ಮತ್ತು ಮೇಕ್ ಇನ್ ಇಂಡಿಯಾ ಜಾಗತಿಕ ಬೆಳವಣಿಗೆಗೆ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ’ ಎಂದು ಪ್ರತಿಪಾದಿಸಿದ ಅವರು, ಈ ದಿಶೆಯಲ್ಲಿಯೂ ಆಧ್ಯಾತ್ಮಿಕ ಕೇಂದ್ರಗಳು ಸ್ಫೂರ್ತಿಯ ಕೇಂದ್ರಗಳಾಗಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಚ್ಚಿದಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳಿಗೆ ಮೋದಿ ನಮನ ಸಲ್ಲಿಸಿದರು. ಸಚ್ಚಿದಾನಂದ ಸ್ವಾಮಿಗಳು ಅವಧೂತ ದತ್ತಪೀಠವನ್ನು ಸ್ಥಾಪಿಸಿದ್ದು, ಇದು ಅಂತರರಾಷ್ಟ್ರೀಯ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಲ್ಯಾಣ ಸಂಸ್ಥೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>