<p><strong>ನವದೆಹಲಿ</strong>: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ.</p>.<p>1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್ಗೆ ಎರಡು ಟಿಕೆಟ್ ಪಡೆದಿದ್ದರು. ₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು ದಶಕಕ್ಕೂ ಹೆಚ್ಚು ಕಾಲ 120 ಬಾರಿ ವಿಚಾರಣೆ ನಡೆಸಿದೆ. ಅಂತಿಮವಾಗಿ ಚತುರ್ವೇದಿ ಅವರಿಗೆ ₹20 ಹೆಚ್ಚುವರಿ ಶುಲ್ಕದ ಜೊತೆಗೆ 12 ವರ್ಷದ ಬಡ್ಡಿ ಸೇರಿ ₹15,000 ಪರಿಹಾರ ಹಣವಾಗಿ ನೀಡಲು ನ್ಯಾಯಾಲಯ ಆದೇಶ ನೀಡಿದೆ.</p>.<p>‘ಸ್ವತಃ ವಕೀಲನಾಗಿದ್ದೂ ಪ್ರಕರಣದಿಂದ ನೂರಾರು ಗಂಟೆಯ ಶ್ರಮ ಮತ್ತು ₹20,000ಕ್ಕೂ ಹೆಚ್ಚು ಹಣ ವ್ಯಯವಾಗಿದೆ. ಇದು ಹಣದ ಪ್ರಶ್ನೆ ಅಲ್ಲ. ಹಕ್ಕಿನ ಪ್ರಶ್ನೆ. ಒಬ್ಬ ನಾಗರಿಕನಾಗಿ ಭ್ರಷ್ಟ ವ್ಯವಸ್ಥೆಯನ್ನು ಪ್ರಶ್ನಿಸುವುದು ನನ್ನ ಹಕ್ಕು’ ಎಂದು ಚತುರ್ವೇದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ.</p>.<p>1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್ಗೆ ಎರಡು ಟಿಕೆಟ್ ಪಡೆದಿದ್ದರು. ₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು ದಶಕಕ್ಕೂ ಹೆಚ್ಚು ಕಾಲ 120 ಬಾರಿ ವಿಚಾರಣೆ ನಡೆಸಿದೆ. ಅಂತಿಮವಾಗಿ ಚತುರ್ವೇದಿ ಅವರಿಗೆ ₹20 ಹೆಚ್ಚುವರಿ ಶುಲ್ಕದ ಜೊತೆಗೆ 12 ವರ್ಷದ ಬಡ್ಡಿ ಸೇರಿ ₹15,000 ಪರಿಹಾರ ಹಣವಾಗಿ ನೀಡಲು ನ್ಯಾಯಾಲಯ ಆದೇಶ ನೀಡಿದೆ.</p>.<p>‘ಸ್ವತಃ ವಕೀಲನಾಗಿದ್ದೂ ಪ್ರಕರಣದಿಂದ ನೂರಾರು ಗಂಟೆಯ ಶ್ರಮ ಮತ್ತು ₹20,000ಕ್ಕೂ ಹೆಚ್ಚು ಹಣ ವ್ಯಯವಾಗಿದೆ. ಇದು ಹಣದ ಪ್ರಶ್ನೆ ಅಲ್ಲ. ಹಕ್ಕಿನ ಪ್ರಶ್ನೆ. ಒಬ್ಬ ನಾಗರಿಕನಾಗಿ ಭ್ರಷ್ಟ ವ್ಯವಸ್ಥೆಯನ್ನು ಪ್ರಶ್ನಿಸುವುದು ನನ್ನ ಹಕ್ಕು’ ಎಂದು ಚತುರ್ವೇದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>