ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ ಜನರಲ್ ನರವಣೆ, 'ಫೆಬ್ರುವರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಕದನ ವಿರಾಮ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಅನಂತರದಲ್ಲಿ ಎಲ್ಒಸಿಯಲ್ಲಿ ಒಳನುಸುಳುವಿಕೆ ನಡೆದಿಲ್ಲ' ಎಂದು ತಿಳಿಸಿದ್ದಾರೆ.