ಕಾರ್ತಿಕ್ ವಾಸುದೇವ್ ಟೊರಂಟೊದ ಶೇರ್ಬಾರ್ನೆ ಸಬ್ವೇ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ 5.30 ರ ಸುಮಾರು ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಬಂದು ಮನಸೋಇಚ್ಚೆ ಗುಂಡು ಹಾರಿಸಿದ್ದು ಕಂಡು ಬಂದಿದೆ. ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.