ಗುಜರಾತಿನಲ್ಲಿ 2002ರಲ್ಲಿ ನಡೆದಿದ್ದ ಗೋಧ್ರಾ ಮತ್ತು ಗೋಧ್ರೋತ್ತರ ಹತ್ಯಾ ಕಾಂಡಗಳು ಹಾಗೂ ಆಗ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಕ್ರಮಗಳ ಕುರಿತು ಬಿಬಿಸಿಯು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿ, ಪ್ರಸಾರ ಮಾಡಿದೆ. ಈ ಸಾಕ್ಷ್ಯಚಿತ್ರಕ್ಕೆ ಭಾರತದ ವಿದೇಶಾಂಗ ಸಚಿವಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜತೆಗೆ ಈ ಸಾಕ್ಷ್ಯಚಿತ್ರದ ಲಿಂಕ್ಗಳು ಇರುವ ಟ್ವೀಟ್ ಮತ್ತು ವಿಡಿಯೊಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಮತ್ತು ಯೂಟ್ಯೂಬ್ಗೆ ಸೂಚಿಸಿತ್ತು. ಇದರ ಬೆನ್ನಲ್ಲೇ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಹಲವು ಸಂಘಟನೆಗಳು ಸಿದ್ಧತೆ ನಡೆಸಿದ್ದವು.