ಭಾರತವು ಮಂಗಳವಾರ ಅಫ್ಗನ್ನ ಸಿಖ್ಖರು ಮತ್ತು ಹಿಂದೂಗಳು ಸೇರಿದಂತೆ ತನ್ನ 78 ಪ್ರಜೆಗಳನ್ನು ತಜಕಿಸ್ತಾನದ ರಾಜಧಾನಿ ದುಶಾಂಬೆಯಿಂದ ಕರೆತಂದಿತು. ಈ ವಿಚಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ, ಕಾರ್ಯಾಚರಣೆಗೆ 'ಆಪರೇಷನ್ ದೇವಿ ಶಕ್ತಿ' ಎಂಬ ಹೆಸರಿಟ್ಟಿರುವುದಾಗಿಯೂ ಅವರು ತಿಳಿಸಿದ್ದಾರೆ.