<p><strong>ತ್ರಿಶೂರ್ (ಕೇರಳ): ‘</strong>ಭಾರತದ ಮೊದಲ ಕೋವಿಡ್ ರೋಗಿ, ವೈದ್ಯಕೀಯ ವಿದ್ಯಾರ್ಥಿನಿಗೆ ಮತ್ತೊಮ್ಮೆ ಸೋಂಕು ತಗುಲಿದೆ’ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.</p>.<p>‘ಆರ್ಟಿ–ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆ್ಯಂಟಿಜನ್ ಪರೀಕ್ಷೆಯ ಫಲಿತಾಂಶವು ನೆಗೆಟಿವ್ ಬಂದಿತ್ತು’ ಎಂದು ತ್ರಿಶೂರ್ನ ಡಿಎಂಆರ್ ಡಾ.ಕೆ.ಜೆ ರೀನಾ ಅವರು ಮಾಹಿತಿ ನೀಡಿದರು.</p>.<p>‘ವಿದ್ಯಾಭ್ಯಾಸಕ್ಕೆಂದು ನವದೆಹಲಿಗೆ ತೆರಳಲು ಅವರು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಅವರು ಆರ್ಟಿ–ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ ಸೋಂಕಿನ ಯಾವುದೇ ರೋಗಲಕ್ಷಣಗಳಿಲ್ಲ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕ ವಾಸವಾಗಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಅವರು ಹೇಳಿದರು.</p>.<p>ವುಹಾನ್ ವಿಶ್ವವಿದ್ಯಾಲಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಸೆಮಿಸ್ಟರ್ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. 2020ರ ಜನವರಿ 30ರಂದು ಅವರಲ್ಲಿ ಸೋಂಕು ದೃಢಪಟ್ಟಿತ್ತು. ಇದು ಭಾರತದ ಪ್ರಥಮ ಕೋವಿಡ್ ಪ್ರಕರಣವಾಗಿತ್ತು. ಸುಮಾರು ಮೂರು ವಾರಗಳ ಚಿಕಿತ್ಸೆಯ ಬಳಿಕ ಅವರು ಸೋಂಕಿನಿಂದ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್ (ಕೇರಳ): ‘</strong>ಭಾರತದ ಮೊದಲ ಕೋವಿಡ್ ರೋಗಿ, ವೈದ್ಯಕೀಯ ವಿದ್ಯಾರ್ಥಿನಿಗೆ ಮತ್ತೊಮ್ಮೆ ಸೋಂಕು ತಗುಲಿದೆ’ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.</p>.<p>‘ಆರ್ಟಿ–ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆ್ಯಂಟಿಜನ್ ಪರೀಕ್ಷೆಯ ಫಲಿತಾಂಶವು ನೆಗೆಟಿವ್ ಬಂದಿತ್ತು’ ಎಂದು ತ್ರಿಶೂರ್ನ ಡಿಎಂಆರ್ ಡಾ.ಕೆ.ಜೆ ರೀನಾ ಅವರು ಮಾಹಿತಿ ನೀಡಿದರು.</p>.<p>‘ವಿದ್ಯಾಭ್ಯಾಸಕ್ಕೆಂದು ನವದೆಹಲಿಗೆ ತೆರಳಲು ಅವರು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಅವರು ಆರ್ಟಿ–ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ ಸೋಂಕಿನ ಯಾವುದೇ ರೋಗಲಕ್ಷಣಗಳಿಲ್ಲ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕ ವಾಸವಾಗಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಅವರು ಹೇಳಿದರು.</p>.<p>ವುಹಾನ್ ವಿಶ್ವವಿದ್ಯಾಲಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಸೆಮಿಸ್ಟರ್ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. 2020ರ ಜನವರಿ 30ರಂದು ಅವರಲ್ಲಿ ಸೋಂಕು ದೃಢಪಟ್ಟಿತ್ತು. ಇದು ಭಾರತದ ಪ್ರಥಮ ಕೋವಿಡ್ ಪ್ರಕರಣವಾಗಿತ್ತು. ಸುಮಾರು ಮೂರು ವಾರಗಳ ಚಿಕಿತ್ಸೆಯ ಬಳಿಕ ಅವರು ಸೋಂಕಿನಿಂದ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>