ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರ ಶೀಘ್ರವೇ ಪುನರಾರಂಭ

Last Updated 17 ಏಪ್ರಿಲ್ 2021, 14:44 IST
ಅಕ್ಷರ ಗಾತ್ರ

ನವದೆಹಲಿ: ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನಲ್ಲಿ ತೆರೆಯಲಾಗಿದ್ದ ದೇಶದ ಅತಿದೊಡ್ಡ ಕೋವಿಡ್‌ -19 ಚಿಕಿತ್ಸಾ ಸೌಲಭ್ಯದ ಆರೈಕೆ ಕೇಂದ್ರವನ್ನು ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಪುನರಾರಂಭಿಸಲಾಗುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ರಾಜಧಾನಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಮನಾರ್ಹವಾಗಿ ಕಡಿಮೆಯಾಗಿದ್ದ ಕಾರಣಕ್ಕೆ ಫೆಬ್ರುವರಿಯಲ್ಲಿ ಮುಚ್ಚಲಾಗಿತ್ತು. ಏಮ್ಸ್ ಮತ್ತು ಸಫ್ದರ್‌ಜಂಗ್‌ ಸೇರಿದಂತೆ ನಗರದ 11 ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ಈ ಕೇಂದ್ರಕ್ಕೆ ಕಳುಹಿಸುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT