ನವದೆಹಲಿ: ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ನಲ್ಲಿ ತೆರೆಯಲಾಗಿದ್ದ ದೇಶದ ಅತಿದೊಡ್ಡ ಕೋವಿಡ್ -19 ಚಿಕಿತ್ಸಾ ಸೌಲಭ್ಯದ ಆರೈಕೆ ಕೇಂದ್ರವನ್ನು ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಪುನರಾರಂಭಿಸಲಾಗುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ರಾಜಧಾನಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಮನಾರ್ಹವಾಗಿ ಕಡಿಮೆಯಾಗಿದ್ದ ಕಾರಣಕ್ಕೆ ಫೆಬ್ರುವರಿಯಲ್ಲಿ ಮುಚ್ಚಲಾಗಿತ್ತು. ಏಮ್ಸ್ ಮತ್ತು ಸಫ್ದರ್ಜಂಗ್ ಸೇರಿದಂತೆ ನಗರದ 11 ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ಈ ಕೇಂದ್ರಕ್ಕೆ ಕಳುಹಿಸುತ್ತಿದ್ದವು.