<p><strong>ಲಖನೌ: </strong>ದೇಶದ ಅತಿ ಎತ್ತರದ ವ್ಯಕ್ತಿ ಎನಿಸಿಕೊಂಡಿರುವ ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಶನಿವಾರ ಸಮಾಜವಾದಿ ಪಕ್ಷಕ್ಕೆ (ಎಸ್ಪಿ) ಸೇರ್ಪಡೆಯಾದರು. ಅವರು 8 ಅಡಿ 1 ಇಂಚು ಎತ್ತರವಿದ್ದಾರೆ.</p>.<p>ಪಕ್ಷದ ಪರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸುವುದಾಗಿ ಪ್ರತಾಪ್ ಸಿಂಗ್ ಅವರು ಪ್ರಕಟಿಸಿದ್ದಾರೆ. ‘ಸಮಾಜವಾದಿ ಪಕ್ಷದ ನೀತಿಗಳು ಹಾಗೂ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಪಕ್ಷ ಸೇರಿದ್ದೇನೆ. ಅಖಿಲೇಶ್ ಅವರು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಅವಿವಾಹಿತರಾಗಿರುವ 46 ವರ್ಷದ ಪ್ರತಾಪ್ ಸಿಂಗ್ ಅವರಿಗೆ ಈಗಲೂ ಉದ್ಯೋಗ ಸಿಕ್ಕಿಲ್ಲ. ತಮ್ಮ ಕುಟುಂಬದವರು ಹಾಗೂ ಸ್ನೇಹಿತರು ಸಾಕಷ್ಟು ಹುಡುಕಾಡಿದರೂ, ತಮಗೆ ಹೊಂದಿಕೆಯಾಗುವ ಜೋಡಿ ಸಿಕ್ಕಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.</p>.<p>ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಪ್ರತಾಪ್, ಎತ್ತರದ ನಿಲುವಿನಿಂದಾಗಿ ಹೋದ ಕಡೆಯೆಲ್ಲಾ ಜನರಿಂದ ಗುರುತಿಸಿಕೊಳ್ಳುತ್ತಾರೆ. ಜನರು ಇವರನ್ನು ಸುತ್ತುವರಿದು ಸೆಲ್ಫಿ ತೆಗೆದುಕೊಳ್ಳುತ್ತಾರೆ.</p>.<p>‘ಸಮಾಜದ ಎಲ್ಲ ವರ್ಗಗಳಿಗೂ ನೋವುಂಟು ಮಾಡಿರುವ ಬಿಜೆಪಿಯ ದೋಷಪೂರಿತ ನೀತಿಗಳ ಬಗ್ಗೆ ಜನಜಾಗೃತಿ ಮೂಡಿಸುತ್ತೇನೆ’ ಎಂದು ‘ಲಂಬೂಜಿ’ ಹೇಳಿದ್ದಾರೆ.</p>.<p>ಪ್ರತಾಪ್ ಸಿಂಗ್ ಅವರಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದ್ದು, ಅವರನ್ನು ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ತಿಳಿಸಿದ್ದಾರೆ.</p>.<p>ಎತ್ತರದ ವ್ಯಕ್ತಿಯ ಸೇರ್ಪಡೆಯಿಂದ ಚುನಾವಣಾ ಕಣದಲ್ಲಿ ಸಮಾಜವಾದಿ ಪಕ್ಷವು ಎತ್ತರದ ಸ್ಥಾನಕ್ಕೆ ಹೋಗಲಿದೆಯೇ ಎಂದು ಕಾದುನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ದೇಶದ ಅತಿ ಎತ್ತರದ ವ್ಯಕ್ತಿ ಎನಿಸಿಕೊಂಡಿರುವ ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಶನಿವಾರ ಸಮಾಜವಾದಿ ಪಕ್ಷಕ್ಕೆ (ಎಸ್ಪಿ) ಸೇರ್ಪಡೆಯಾದರು. ಅವರು 8 ಅಡಿ 1 ಇಂಚು ಎತ್ತರವಿದ್ದಾರೆ.</p>.<p>ಪಕ್ಷದ ಪರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸುವುದಾಗಿ ಪ್ರತಾಪ್ ಸಿಂಗ್ ಅವರು ಪ್ರಕಟಿಸಿದ್ದಾರೆ. ‘ಸಮಾಜವಾದಿ ಪಕ್ಷದ ನೀತಿಗಳು ಹಾಗೂ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಪಕ್ಷ ಸೇರಿದ್ದೇನೆ. ಅಖಿಲೇಶ್ ಅವರು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಅವಿವಾಹಿತರಾಗಿರುವ 46 ವರ್ಷದ ಪ್ರತಾಪ್ ಸಿಂಗ್ ಅವರಿಗೆ ಈಗಲೂ ಉದ್ಯೋಗ ಸಿಕ್ಕಿಲ್ಲ. ತಮ್ಮ ಕುಟುಂಬದವರು ಹಾಗೂ ಸ್ನೇಹಿತರು ಸಾಕಷ್ಟು ಹುಡುಕಾಡಿದರೂ, ತಮಗೆ ಹೊಂದಿಕೆಯಾಗುವ ಜೋಡಿ ಸಿಕ್ಕಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.</p>.<p>ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಪ್ರತಾಪ್, ಎತ್ತರದ ನಿಲುವಿನಿಂದಾಗಿ ಹೋದ ಕಡೆಯೆಲ್ಲಾ ಜನರಿಂದ ಗುರುತಿಸಿಕೊಳ್ಳುತ್ತಾರೆ. ಜನರು ಇವರನ್ನು ಸುತ್ತುವರಿದು ಸೆಲ್ಫಿ ತೆಗೆದುಕೊಳ್ಳುತ್ತಾರೆ.</p>.<p>‘ಸಮಾಜದ ಎಲ್ಲ ವರ್ಗಗಳಿಗೂ ನೋವುಂಟು ಮಾಡಿರುವ ಬಿಜೆಪಿಯ ದೋಷಪೂರಿತ ನೀತಿಗಳ ಬಗ್ಗೆ ಜನಜಾಗೃತಿ ಮೂಡಿಸುತ್ತೇನೆ’ ಎಂದು ‘ಲಂಬೂಜಿ’ ಹೇಳಿದ್ದಾರೆ.</p>.<p>ಪ್ರತಾಪ್ ಸಿಂಗ್ ಅವರಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದ್ದು, ಅವರನ್ನು ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ತಿಳಿಸಿದ್ದಾರೆ.</p>.<p>ಎತ್ತರದ ವ್ಯಕ್ತಿಯ ಸೇರ್ಪಡೆಯಿಂದ ಚುನಾವಣಾ ಕಣದಲ್ಲಿ ಸಮಾಜವಾದಿ ಪಕ್ಷವು ಎತ್ತರದ ಸ್ಥಾನಕ್ಕೆ ಹೋಗಲಿದೆಯೇ ಎಂದು ಕಾದುನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>