<p><strong>ಬೆಂಗಳೂರು:</strong> ಕಾಂಗ್ರೆಸ್ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ‘ಆ ದಿನಗಳು’ ಖ್ಯಾತಿಯನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕುರಿತು ನಿರಂತರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿರುವ ಚೇತನ್, ಅದರಲ್ಲಿ ಟೀಕೆ, ವಿಮರ್ಶೆಗಳನ್ನೂ ಮಾಡುತ್ತಿದ್ದಾರೆ. ಈಗ ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡಿದ್ದಾರೆ.</p>.<p>‘1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳು ಇಂದಿರಾ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ವಂಶ ರಾಜಕಾರಣಿಯಾದ ಇಂದಿರಾ ಮುಂದೆ ಪ್ರಶ್ನಾರ್ಹ ಪ್ರಧಾನಿಯೂ ಆಗುತ್ತಾರೆ. ಆ ಮೂಲಕ ಕಾಂಗ್ರೆಸ್ನ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅವರು ಅಡಿಪಾಯ ಹಾಕುತ್ತಾರೆ,’ ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕೇವಲ ಕೆಲವು ಗಣ್ಯ ವ್ಯಕ್ತಿಗಳಿಗಷ್ಟೇ ಅಲ್ಲದೇ, ನಮ್ಮೆಲ್ಲರಿಗೂ ನಮ್ಮ ದೇಶವನ್ನು ಕಟ್ಟುವ ಅವಕಾಶ ಸಿಗಬೇಕು,’ ಎಂದೂ ಅವರು ಅನಿಸಿಕೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ‘ಆ ದಿನಗಳು’ ಖ್ಯಾತಿಯನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕುರಿತು ನಿರಂತರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿರುವ ಚೇತನ್, ಅದರಲ್ಲಿ ಟೀಕೆ, ವಿಮರ್ಶೆಗಳನ್ನೂ ಮಾಡುತ್ತಿದ್ದಾರೆ. ಈಗ ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡಿದ್ದಾರೆ.</p>.<p>‘1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳು ಇಂದಿರಾ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ವಂಶ ರಾಜಕಾರಣಿಯಾದ ಇಂದಿರಾ ಮುಂದೆ ಪ್ರಶ್ನಾರ್ಹ ಪ್ರಧಾನಿಯೂ ಆಗುತ್ತಾರೆ. ಆ ಮೂಲಕ ಕಾಂಗ್ರೆಸ್ನ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅವರು ಅಡಿಪಾಯ ಹಾಕುತ್ತಾರೆ,’ ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕೇವಲ ಕೆಲವು ಗಣ್ಯ ವ್ಯಕ್ತಿಗಳಿಗಷ್ಟೇ ಅಲ್ಲದೇ, ನಮ್ಮೆಲ್ಲರಿಗೂ ನಮ್ಮ ದೇಶವನ್ನು ಕಟ್ಟುವ ಅವಕಾಶ ಸಿಗಬೇಕು,’ ಎಂದೂ ಅವರು ಅನಿಸಿಕೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>