ಪ್ರಕರಣ ಕುರಿತು ಮಾತನಾಡಿರುವ ಪಿಲಿಭಿತ್ನ ಪೊಲೀಸ್ ಸೂಪರಿಂಟೆಂಡೆಂಟ್ ಜೈ ಪ್ರಕಾಶ್ ಅವರು, ʼಭಾರತದ ಮೂವರು ನೇಪಾಳ ಗಡಿ ಪ್ರವೇಶಿಸಿದ್ದಾರೆ ಹಾಗೂ ಅಲ್ಲಿನಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂಬ ವಿಚಾರ ತಿಳಿಯಿತು. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿದ್ದವ್ಯಕ್ತಿಯು ಆಸ್ಪತ್ರೆಗೆ ಸೇರಿಸುವ ವೇಳೆ ಮೃತಪಟ್ಟಿದ್ದಾನೆ. ಮತ್ತೊಬ್ಬ ಭಾರತದ ಗಡಿಯತ್ತ ಧಾವಿಸಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆʼ ಎಂದು ತಿಳಿಸಿದ್ದಾರೆ.