<p><strong>ಇಂದೋರ್(ಮಧ್ಯಪ್ರದೇಶ):</strong> ವಿದ್ಯಾರ್ಥಿ ಹಚ್ಚಿದ ಬೆಂಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಇಂದೋರ್ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಶನಿವಾರ ನಿಧನರಾಗಿದ್ದಾರೆ.</p>.<p>ಫೆಬ್ರುವರಿ 20ರಂದು ನಡೆದಿದ್ದ ಘಟನೆಯಲ್ಲಿ ಶೇಕಡ 80ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ ವಿಮುಕ್ತಿ ಶರ್ಮಾ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ನಸುಕಿನ 4 ಗಂಟೆಯಲ್ಲಿ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p>54 ವರ್ಷದ ವಿಮುಕ್ತಿ ಶರ್ಮಾ ಅವರು ಮನೆಗೆ ತೆರಳುತ್ತಿದ್ದ ವೇಳೆ ಬಿಎಂ ಫಾರ್ಮಸಿ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿತ್ತು. ಅಂಕ ಪಟ್ಟಿ ನೀಡುವಲ್ಲಿ ವಿಳಂಬವಾಗಿದ್ದ ವಿಮುಕ್ತಿ ಶರ್ಮಾ ಅವರೊಂದಿಗೆ ವಾಗ್ವಾದ ನಡೆಸಿದ್ದ ಆರೋಪಿ, ಮಾಜಿ ವಿದ್ಯಾರ್ಥಿಯೂ ಆದ ಅಶುತೋಷ್ ಶ್ರೀವಾಸ್ತವ (24) ನಂತರ ಪೆಟ್ರೋಲ್ ಸುರಿದು ಸಿಗರೇಟ್ ಲೈಟರ್ನಿಂದ ಬೆಂಕಿ ಹಚ್ಚಿದ್ದ.</p>.<p>ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಶ್ರೀವಾಸ್ತವನನ್ನು ಬಂಧಿಸಲಾಗಿತ್ತು.</p>.<p>‘ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರಿನ್ಸಿಪಾಲ್ ವಿಮುಕ್ತಿ ಶರ್ಮಾ ಅವರು ಕೊನೆಯುಸಿರೆಳಿದ್ದಾರೆ. ಅವರಿಗೆ ಬೆಂಕಿ ಹಚ್ಚಿದ ವಿದ್ಯಾರ್ಥಿಯು 7 ನೇ ಸೆಮಿಸ್ಟರ್ನಲ್ಲಿ ಅನುತ್ತೀರ್ಣನಾಗಿದ್ದ ಎಂಬುದು ಗೊತ್ತಾಗಿದೆ. ನಾವು ಈಗಾಗಲೇ ಆತನನ್ನು ಬಂಧಿಸಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ (ಇಂದೋರ್ ಗ್ರಾಮಾಂತರ) ಭಗವತ್ ಸಿಂಗ್ ವಿರ್ಡೆ ಹೇಳಿದ್ದಾರೆ.</p>.<p>‘ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಪ್ರಿನ್ಸಿಪಾಲ್ ವಿಮುಕ್ತಿ ಶರ್ಮಾ ಮತ್ತು ಸಿಬ್ಬಂದಿ ಎರಡು ಮೂರು ದೂರುಗಳನ್ನು ನೀಡಿದ್ದರು ಎಂಬುದು ಗೊತ್ತಾಗಿದೆ’ ಎಂದು ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್(ಮಧ್ಯಪ್ರದೇಶ):</strong> ವಿದ್ಯಾರ್ಥಿ ಹಚ್ಚಿದ ಬೆಂಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಇಂದೋರ್ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಶನಿವಾರ ನಿಧನರಾಗಿದ್ದಾರೆ.</p>.<p>ಫೆಬ್ರುವರಿ 20ರಂದು ನಡೆದಿದ್ದ ಘಟನೆಯಲ್ಲಿ ಶೇಕಡ 80ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ ವಿಮುಕ್ತಿ ಶರ್ಮಾ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ನಸುಕಿನ 4 ಗಂಟೆಯಲ್ಲಿ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p>54 ವರ್ಷದ ವಿಮುಕ್ತಿ ಶರ್ಮಾ ಅವರು ಮನೆಗೆ ತೆರಳುತ್ತಿದ್ದ ವೇಳೆ ಬಿಎಂ ಫಾರ್ಮಸಿ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿತ್ತು. ಅಂಕ ಪಟ್ಟಿ ನೀಡುವಲ್ಲಿ ವಿಳಂಬವಾಗಿದ್ದ ವಿಮುಕ್ತಿ ಶರ್ಮಾ ಅವರೊಂದಿಗೆ ವಾಗ್ವಾದ ನಡೆಸಿದ್ದ ಆರೋಪಿ, ಮಾಜಿ ವಿದ್ಯಾರ್ಥಿಯೂ ಆದ ಅಶುತೋಷ್ ಶ್ರೀವಾಸ್ತವ (24) ನಂತರ ಪೆಟ್ರೋಲ್ ಸುರಿದು ಸಿಗರೇಟ್ ಲೈಟರ್ನಿಂದ ಬೆಂಕಿ ಹಚ್ಚಿದ್ದ.</p>.<p>ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಶ್ರೀವಾಸ್ತವನನ್ನು ಬಂಧಿಸಲಾಗಿತ್ತು.</p>.<p>‘ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರಿನ್ಸಿಪಾಲ್ ವಿಮುಕ್ತಿ ಶರ್ಮಾ ಅವರು ಕೊನೆಯುಸಿರೆಳಿದ್ದಾರೆ. ಅವರಿಗೆ ಬೆಂಕಿ ಹಚ್ಚಿದ ವಿದ್ಯಾರ್ಥಿಯು 7 ನೇ ಸೆಮಿಸ್ಟರ್ನಲ್ಲಿ ಅನುತ್ತೀರ್ಣನಾಗಿದ್ದ ಎಂಬುದು ಗೊತ್ತಾಗಿದೆ. ನಾವು ಈಗಾಗಲೇ ಆತನನ್ನು ಬಂಧಿಸಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ (ಇಂದೋರ್ ಗ್ರಾಮಾಂತರ) ಭಗವತ್ ಸಿಂಗ್ ವಿರ್ಡೆ ಹೇಳಿದ್ದಾರೆ.</p>.<p>‘ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಪ್ರಿನ್ಸಿಪಾಲ್ ವಿಮುಕ್ತಿ ಶರ್ಮಾ ಮತ್ತು ಸಿಬ್ಬಂದಿ ಎರಡು ಮೂರು ದೂರುಗಳನ್ನು ನೀಡಿದ್ದರು ಎಂಬುದು ಗೊತ್ತಾಗಿದೆ’ ಎಂದು ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>