ಆಮ್ಲಜನಕ ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದರಿಂದ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಕೋವಿಡ್ ರೋಗಿಗಳಿಗೆ ಕಡಿಮೆ ಆಮ್ಲಜನಕವನ್ನು ನೀಡುವ ಪರಿಸ್ಥಿತಿ ಎದುರಾಗಿದೆ. ಆಮ್ಲಜನಕ ಪೂರೈಕೆಯನ್ನು ನಿಲ್ಲಿಸಲು ಸಾಧ್ಯವಾಗದಂತಹ ಕೈಗಾರಿಕೆಗಳು ಯಾವುವು ಎಂದು ಪೀಠವು ಕೇಂದ್ರ ಸರ್ಕಾರದ ಪರ ವಕೀಲರಾದ ಮೋನಿಕಾ ಅರೋರಾ ಅವರನ್ನು ಪ್ರಶ್ನಿಸಿತು. ಅಲ್ಲದೆ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ತಿಳಿಸುವಂತೆ ಪೀಠವು ಸೂಚಿಸಿತು.