ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ಮೊಸರು, ಮಜ್ಜಿಗೆ, ಜೇನುತುಪ್ಪ, ಗೋಧಿ, ಅಕ್ಕಿ ಮುಂತಾದವುಗಳ ಮೇಲೆ ವಿಧಿಸಿರುವ ಜಿಎಸ್ಟಿಯಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ ₹7,500 ಕೋಟಿ ಆದಾಯ ಬರುತ್ತದೆ. ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಇಲ್ಲಿಯವರೆಗೆ ₹6,300 ಕೋಟಿ ಖರ್ಚು ಮಾಡಿದೆ. ಈ ಸರ್ಕಾರಗಳು ಉರುಳದೇ ಹೋಗಿದ್ದರೆ ಗೋಧಿ, ಅಕ್ಕಿ, ಮಜ್ಜಿಗೆ ಇತ್ಯಾದಿಗಳ ಮೇಲೆ ಜಿಎಸ್ಟಿ ಹೇರಿಕೆಯಾಗುತ್ತಲೇ ಇರಲಿಲ್ಲ. ಜನರು ಹಣದುಬ್ಬರವನ್ನು ಎದುರಿಸಬೇಕಾಗಿರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.