ಬುಧವಾರ, ಮಾರ್ಚ್ 29, 2023
24 °C

ಅಂಬೇಡ್ಕರ್‌ಗೆ ಅವಮಾನ: ‘ಮಹಾ’ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲಗೆ ಮಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಪುಣೆ ನಗರದಲ್ಲಿ ಶನಿವಾರ ವ್ಯಕ್ತಿಯೊಬ್ಬರು ಮಸಿ ಬಳಿದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಚಿವ ಹೊರಗೆ ಬರುತ್ತಿದ್ದಂತೆಯೇ ಎದುರಿನಿಂದ ನುಗ್ಗಿದ ವ್ಯಕ್ತಿ ಚೀರಾಡುತ್ತ ಮುಖಕ್ಕೆ ಮಸಿ ಬಳಿದರು. ಏಕಾಏಕಿ ದಾಳಿಯಿಂದ ವಿಚಲಿತರಾದ ಸಚಿವ ಚಂದ್ರಕಾಂತ ಅವರು ಪೊಲೀಸರ ಆಶ್ರಯ ಪಡೆದರು.

ತಕ್ಷಣ ಧಾವಿಸಿದ ಪೊಲೀಸರು ಸಚಿವರನ್ನು ದೂರ ಸರಿಸಿ, ಆರೋಪಿಯನ್ನು ನೆಲಕ್ಕೆ ಕೆಡವಿ ಹಿಡಿದರು. ಇದರಿಂದಾಗಿ ಸ್ಥಳದಲ್ಲಿ ಸಂಜೆಯವರೆಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು ಎಂದು ಪುಣೆಯ ನಿವಾಸಿಗಳು ಮಾಹಿತಿ ನೀಡಿದರು.

ಮಹಾರಾಷ್ಟ್ರದ ಪೈಠಾಣ ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಚಂದ್ರಕಾಂತ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಸಚಿವ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದವು. ಅದಕ್ಕೆ ಬೆಲೆ ಕೊಡದ ಸಚಿವ ‘ಧೈರ್ಯವಿದ್ದವರು ಮುಂದೆ ಬರುವಂತೆ’ ಸವಾಲು ಹಾಕಿದ್ದರು. ಹೀಗಾಗಿ, ಮಸಿ ಬಳಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಗೆ ಭೇಟಿ ನೀಡಿ, ಎಂಇಎಸ್‌ ನೇತೃತ್ವದಲ್ಲಿ ಮಹಾ ಸಮಾವೇಶ ಮಾಡಿಯೇ ಸಿದ್ಧ ಎಂದು ಪಟ್ಟು ಹಿಡಿಯುವ ಮೂಲಕ, ಚಂದ್ರಕಾಂತ ಪಾಟೀಲ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಶನಿವಾರ ಅವರ ಮುಖಕ್ಕೆ ಮಸಿ ಬಳಿದ ವಿಡಿಯೊ ತುಣುಕುಗಳು ಜಿಲ್ಲೆಯಲ್ಲಿಯೂ ಕಾಳ್ಗಿಚ್ಚಿನಂತೆ ಹರಿದಾಡಿದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು