ಮಾನವ ಸಂಪನ್ಮೂಲ ಮತ್ತು ಹಿಂದೂ ಧಾರ್ಮಿಕ ಮತ್ತು ದತ್ತಿನಿಧಿ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತರಬೇತಿ ಪಡೆದ ಬ್ರಾಹ್ಮಣೇತರರನ್ನು ತಮಿಳುನಾಡಿನಲ್ಲಿ ಅರ್ಚಕರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವ ಸಲುವಾಗಿ 2006ರಲ್ಲಿ ದಿ.ಎಂ. ಕರುಣಾನಿಧಿ ನೇತೃತ್ವದ ಸರ್ಕಾರವು ಅಂಗೀಕರಿಸಿದ ಸರ್ಕಾರಿ ಆದೇಶವನ್ನು ಜಾರಿಗೆ ತರಲು ಡಿಎಂಕೆ ಸರ್ಕಾರವು ಬದ್ಧವಾಗಿದೆ’ ಎಂದೂ ಹೇಳಿದ್ದಾರೆ.