ನವದೆಹಲಿ: ರಾಮನಗರದ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಿದರು.
ಇಲ್ಲಿನ ಖಾನ್ ಮಾರ್ಕೆಟ್ ಬಳಿ ಇರುವ ಇ.ಡಿ. ಪ್ರಧಾನ ಕಚೇರಿಗೆ ಬೆಳಿಗ್ಗೆ ಪ್ರಮುಖ ದಾಖಲೆಗಳೊಂದಿಗೆ ಬಂದ ಇಕ್ಬಾಲ್ ಅವರನ್ನು ರಾತ್ರಿ 9ರವರೆಗೂ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳು, ಹಣಕಾಸಿನ ವ್ಯವಹಾರಗಳ ಕುರಿತು ಮಹತ್ವದ ಮಾಹಿತಿ ಸಂಗ್ರಹಿಸಿದರು.
ಮತ್ತೆ ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಇಕ್ಬಾಲ್ ಅವರು ಸೆಪ್ಟೆಂಬರ್ 17ರಂದು ಇ.ಡಿ. ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದರು.