<p><strong>ಕೋಲ್ಕತ್ತ:</strong>ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ವಿಜಯ ದಾಖಲಿಸಿದೆ ಎಂದು ಭವಿಷ್ಯ ನುಡಿಯಲು ಪ್ರಧಾನಿ ನರೇಂದ್ರ ಮೋದಿ ಯಾರು? ದೇವರು ಅಥವಾ ಸೂಪರ್ ಹ್ಯೂಮನ್ ಆಗಿದ್ದಾರೆಯೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.</p>.<p>ನೀವು (ಮೋದಿ) ಸ್ವಯಂ ಏನನ್ನು ಯೋಚಿಸುತ್ತೀರಿ? ದೇವರು ಅಥವಾ ಸೂಪರ್ ಹ್ಯೂಮನ್? ಎಂದು ದೀದಿ ವಾಗ್ದಾಳಿ ನಡೆಸಿದ್ದಾರೆ.</p>.<p>ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಸರ್ಕಾರವು ಅಧಿಕಾರಕ್ಕೇರಲಿದ್ದು, ಶೀಘ್ರದಲ್ಲೇ ಪಿಎಂ ಕಿಸಾನ್ ನಿಧಿ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿಕೆ ನೀಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/govt-will-continue-fight-against-enemies-of-peace-home-minister-shah-819230.html" itemprop="url">ಶಾಂತಿ ಕದಡುವವರ ವಿರುದ್ಧ ಹೋರಾಟ ನಿಲ್ಲದು: ಅಮಿತ್ ಶಾ </a></p>.<p>2024ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆಂದು ಟಿಎಂಸಿ ನಾಯಕರು ಹೇಳಿಕೆ ನೀಡಿದ್ದರು. ಇದರ ವಿರುದ್ಧವೂ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೀದಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.</p>.<p>ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾರ್ಚ್ 27ರಿಂದ ಮತದಾನ ಆರಂಭವಾಗಿದ್ದು, ಏಪ್ರಿಲ್ 29ರ ವರೆಗೆ ನಡೆಯಲಿದೆ. ಎರಡು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong>ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ವಿಜಯ ದಾಖಲಿಸಿದೆ ಎಂದು ಭವಿಷ್ಯ ನುಡಿಯಲು ಪ್ರಧಾನಿ ನರೇಂದ್ರ ಮೋದಿ ಯಾರು? ದೇವರು ಅಥವಾ ಸೂಪರ್ ಹ್ಯೂಮನ್ ಆಗಿದ್ದಾರೆಯೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.</p>.<p>ನೀವು (ಮೋದಿ) ಸ್ವಯಂ ಏನನ್ನು ಯೋಚಿಸುತ್ತೀರಿ? ದೇವರು ಅಥವಾ ಸೂಪರ್ ಹ್ಯೂಮನ್? ಎಂದು ದೀದಿ ವಾಗ್ದಾಳಿ ನಡೆಸಿದ್ದಾರೆ.</p>.<p>ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಸರ್ಕಾರವು ಅಧಿಕಾರಕ್ಕೇರಲಿದ್ದು, ಶೀಘ್ರದಲ್ಲೇ ಪಿಎಂ ಕಿಸಾನ್ ನಿಧಿ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿಕೆ ನೀಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/govt-will-continue-fight-against-enemies-of-peace-home-minister-shah-819230.html" itemprop="url">ಶಾಂತಿ ಕದಡುವವರ ವಿರುದ್ಧ ಹೋರಾಟ ನಿಲ್ಲದು: ಅಮಿತ್ ಶಾ </a></p>.<p>2024ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆಂದು ಟಿಎಂಸಿ ನಾಯಕರು ಹೇಳಿಕೆ ನೀಡಿದ್ದರು. ಇದರ ವಿರುದ್ಧವೂ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೀದಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.</p>.<p>ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾರ್ಚ್ 27ರಿಂದ ಮತದಾನ ಆರಂಭವಾಗಿದ್ದು, ಏಪ್ರಿಲ್ 29ರ ವರೆಗೆ ನಡೆಯಲಿದೆ. ಎರಡು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>