<p><strong>ನವದೆಹಲಿ</strong>: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಮತ್ತೇ ಚಾಟಿ ಬೀಸಿದ್ದಾರೆ.</p>.<p>‘ಇಂಧನಗಳ ಮೇಲೆ ಅಧಿಕ ತೆರಿಗೆ ವಿಧಿಸಲಾಗುತ್ತಿದೆ. ಈ ರೀತಿ ತೆರಿಗೆ ವಿಧಿಸುತ್ತಿರುವುದನ್ನು ನೋಡಿದರೆ ಇದೇನು ಸರ್ಕಾರವೋ ಅಥವಾ ಹಳೆಯ ಹಿಂದಿ ಚಿತ್ರಗಳಲ್ಲಿ ತೋರಿಸುವ ದುರಾಸೆಯ ಲೇವಾದೇವಿಗಾರನಂತೆ ಸರ್ಕಾರ ವರ್ತಿಸುತ್ತಿದೆಯೋ ಎನಿಸುತ್ತಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕಳೆದ ಹಣಕಾಸು ವರ್ಷದಲ್ಲಿ ವಿಧಿಸಲಾದ ತೆರಿಗೆ ಪ್ರಮಾಣದಲ್ಲಿ ಶೇ 88ರಷ್ಟು ಹೆಚ್ಚಳ ಮಾಡಲಾಗಿತ್ತು ಎಂದು ಸರ್ಕಾರ ಲೋಕಸಭೆಗೆ ಸೋಮವಾರ ತಿಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡಸಿದ್ದಾರೆ.</p>.<p>ಇಂಧನಗಳ ಮೇಲಿನ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿ ಮಾಧ್ಯಮವೊಂದರ ವರದಿಯನ್ನು ತಮ್ಮ ಟ್ವೀಟ್ನಲ್ಲಿ ಅವರು ಹಂಚಿಕೊಂಡಿದ್ದಾರೆ.</p>.<p>‘ಕೇಂದ್ರ ಸರ್ಕಾರ ಒಂದೆಡೆ ಸಾಲ ತೆಗೆದುಕೊಳ್ಳುವಂತೆ ಜನರನ್ನು ಪ್ರಚೋದಿಸುತ್ತದೆ. ಮತ್ತೊಂದೆಡೆ, ವಿವೇಚನಾ ರಹಿತ ತೆರಿಗೆ ಮೂಲಕ ಜನರ ಸುಲಿಗೆ ಮಾಡುತ್ತಿದೆ’ ಎಂದು ಟೀಕಿಸಿ, ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಮತ್ತೇ ಚಾಟಿ ಬೀಸಿದ್ದಾರೆ.</p>.<p>‘ಇಂಧನಗಳ ಮೇಲೆ ಅಧಿಕ ತೆರಿಗೆ ವಿಧಿಸಲಾಗುತ್ತಿದೆ. ಈ ರೀತಿ ತೆರಿಗೆ ವಿಧಿಸುತ್ತಿರುವುದನ್ನು ನೋಡಿದರೆ ಇದೇನು ಸರ್ಕಾರವೋ ಅಥವಾ ಹಳೆಯ ಹಿಂದಿ ಚಿತ್ರಗಳಲ್ಲಿ ತೋರಿಸುವ ದುರಾಸೆಯ ಲೇವಾದೇವಿಗಾರನಂತೆ ಸರ್ಕಾರ ವರ್ತಿಸುತ್ತಿದೆಯೋ ಎನಿಸುತ್ತಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕಳೆದ ಹಣಕಾಸು ವರ್ಷದಲ್ಲಿ ವಿಧಿಸಲಾದ ತೆರಿಗೆ ಪ್ರಮಾಣದಲ್ಲಿ ಶೇ 88ರಷ್ಟು ಹೆಚ್ಚಳ ಮಾಡಲಾಗಿತ್ತು ಎಂದು ಸರ್ಕಾರ ಲೋಕಸಭೆಗೆ ಸೋಮವಾರ ತಿಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡಸಿದ್ದಾರೆ.</p>.<p>ಇಂಧನಗಳ ಮೇಲಿನ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿ ಮಾಧ್ಯಮವೊಂದರ ವರದಿಯನ್ನು ತಮ್ಮ ಟ್ವೀಟ್ನಲ್ಲಿ ಅವರು ಹಂಚಿಕೊಂಡಿದ್ದಾರೆ.</p>.<p>‘ಕೇಂದ್ರ ಸರ್ಕಾರ ಒಂದೆಡೆ ಸಾಲ ತೆಗೆದುಕೊಳ್ಳುವಂತೆ ಜನರನ್ನು ಪ್ರಚೋದಿಸುತ್ತದೆ. ಮತ್ತೊಂದೆಡೆ, ವಿವೇಚನಾ ರಹಿತ ತೆರಿಗೆ ಮೂಲಕ ಜನರ ಸುಲಿಗೆ ಮಾಡುತ್ತಿದೆ’ ಎಂದು ಟೀಕಿಸಿ, ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>