ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಶಶಿ ತರೂರ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಲು ತರೂರ್ ಅವರು ನಿರಾಕರಿಸಿದ್ದಾರೆ. ಮುಕ್ತ ಮತ್ತು ನ್ಯಾಯೋಚಿತವಾಗಿ ಚುನಾವಣೆ ನಡೆಯಲಿ ಎಂದು ತರೂರ್ ಅವರು ಮಲಯಾಳ ದಿನಪತ್ರಿಕೆ ‘ಮಾತೃಭೂಮಿ’ಗೆ ಬರೆದ ಲೇಖನದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಖಾಲಿಯಿರುವ ಸ್ಥಾನಗಳಿಗೂ ಚುನಾವಣೆ ನಡೆಯಲಿ ಎಂದೂ ಅವರು ಲೇಖನದಲ್ಲಿ ಬರೆದುಕೊಂಡಿದ್ದಾರೆ.