ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್ಸಿಪಿ ಜೊತೆಗೂಡಿ ಅಧಿಕಾರ ನಡೆಸುತ್ತಿರುವ ಶಿವಸೇನಾ, ಹಿಂದಿನಿಂದಲೂ ಔರಂಗಾಬಾದ್ ಹೆಸರು ಬದಲಾವಣೆಗೆ ಬೇಡಿಕೆ ಇರಿಸುತ್ತಿದೆ. ಆದರೆ, ಮಹಾರಾಷ್ಟ್ರ ಸಚಿವ, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಾಳಾಸಾಹೆಬ್ ಥೋರಟ್ ಅವರು ಔರಂಗಾಬಾದ್ ಹೆಸರು ಬದಲಾವಣೆಗೆ ತಮ್ಮ ಪಕ್ಷವು ತೀವ್ರವಾಗಿ ವಿರೋಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ‘ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯವು ತನ್ನಷ್ಟಕ್ಕೇ ನಗರವೊಂದರ ಹೆಸರು ಬದಲಾಯಿಸಬಾರದು’ ಎಂದು ಸಿಎಂಒ ಟ್ವೀಟ್ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದೆ.