<p><strong>ಕೊಯಮತ್ತೂರು: </strong>ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ನಡೆಸುತ್ತಿರುವ ಇಶಾ ವಿದ್ಯಾ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಬಳಸಲು ಇಶಾ ಫೌಂಡೇಶನ್ ಸಂಸ್ಥೆ ತಮಿಳುನಾಡು ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದೆ.</p>.<p>ಕೊಯಮತ್ತೂರು, ಈರೋಡ್, ಸೇಲಂ, ನಾಗರ್ಕೋಯಿಲ್, ತೂತುಕುಡಿ, ವಿಲ್ಲುಪುರಂ, ಕಡಲೂರು ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಇಶಾ ಫೌಡೇಶನ್ ಶಾಲೆಗಳಿವೆ.</p>.<p>‘ನಾವು 990 ಹಾಸಿಗೆಯ ಸಾಮರ್ಥ್ಯ ಹೊಂದಿರುವ ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿರುವ ಇಶಾ ಶಾಲೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುತ್ತಿದ್ದೇವೆ. ಈ ಸವಾಲನ್ನು ಜಯಿಸಲು ಆಡಳಿತ ವರ್ಗದ ಕೈಗಳನ್ನು ಬಲಪಡಿಸುವಲ್ಲಿ ಸಮುದಾಯವನ್ನು ಒಗ್ಗೂಡಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಟ್ವೀಟ್ ಮಾಡಿದ್ದಾರೆ.</p>.<p>ನಗರದ ಹೊರವಲಯದಲ್ಲಿರುವ ತೋಂಡಮುತ್ತೂರ್ನ ಯೋಗ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಶಾಸ್ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ಪ್ರತಿಷ್ಠಾನವು ₹ 11.54 ಕೋಟಿ ಖರ್ಷು ಮಾಡಿದೆ. ಜಗ್ಗಿ ವಾಸುದೇವ್ ಅವರ ಮೂರು ವರ್ಣಚಿತ್ರಗಳನ್ನು ಆನ್ಲೈನ್ ಹರಾಜಿನ ಮೂಲಕ ಮಾರಾಟ ಮಾಡಿ ಈ ಹಣವನ್ನು ಸಂಗ್ರಹಿಸಲಾಗಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ಫೇಸ್ ಶೀಲ್ಡ್, ಸ್ಯಾನಿಟೈಜರ್, ಪಿಪಿಇ ಕಿಟ್ಗಳ ವಿತರಣೆ ಮತ್ತು ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸುವುದು ಸೇರಿದಂತೆ ವೈದ್ಯಕೀಯ ಮೂಲಸೌಕರ್ಯ ಸರಬರಾಜು ಮಾಡುವ ಮೂಲಕ ಸ್ಥಳೀಯ ಆಡಳಿತವನ್ನು ಇಶಾ ಬೆಂಬಲಿಸಿದೆ ಎಂದು ಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು: </strong>ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ನಡೆಸುತ್ತಿರುವ ಇಶಾ ವಿದ್ಯಾ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಬಳಸಲು ಇಶಾ ಫೌಂಡೇಶನ್ ಸಂಸ್ಥೆ ತಮಿಳುನಾಡು ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದೆ.</p>.<p>ಕೊಯಮತ್ತೂರು, ಈರೋಡ್, ಸೇಲಂ, ನಾಗರ್ಕೋಯಿಲ್, ತೂತುಕುಡಿ, ವಿಲ್ಲುಪುರಂ, ಕಡಲೂರು ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಇಶಾ ಫೌಡೇಶನ್ ಶಾಲೆಗಳಿವೆ.</p>.<p>‘ನಾವು 990 ಹಾಸಿಗೆಯ ಸಾಮರ್ಥ್ಯ ಹೊಂದಿರುವ ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿರುವ ಇಶಾ ಶಾಲೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುತ್ತಿದ್ದೇವೆ. ಈ ಸವಾಲನ್ನು ಜಯಿಸಲು ಆಡಳಿತ ವರ್ಗದ ಕೈಗಳನ್ನು ಬಲಪಡಿಸುವಲ್ಲಿ ಸಮುದಾಯವನ್ನು ಒಗ್ಗೂಡಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಟ್ವೀಟ್ ಮಾಡಿದ್ದಾರೆ.</p>.<p>ನಗರದ ಹೊರವಲಯದಲ್ಲಿರುವ ತೋಂಡಮುತ್ತೂರ್ನ ಯೋಗ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಶಾಸ್ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ಪ್ರತಿಷ್ಠಾನವು ₹ 11.54 ಕೋಟಿ ಖರ್ಷು ಮಾಡಿದೆ. ಜಗ್ಗಿ ವಾಸುದೇವ್ ಅವರ ಮೂರು ವರ್ಣಚಿತ್ರಗಳನ್ನು ಆನ್ಲೈನ್ ಹರಾಜಿನ ಮೂಲಕ ಮಾರಾಟ ಮಾಡಿ ಈ ಹಣವನ್ನು ಸಂಗ್ರಹಿಸಲಾಗಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ಫೇಸ್ ಶೀಲ್ಡ್, ಸ್ಯಾನಿಟೈಜರ್, ಪಿಪಿಇ ಕಿಟ್ಗಳ ವಿತರಣೆ ಮತ್ತು ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸುವುದು ಸೇರಿದಂತೆ ವೈದ್ಯಕೀಯ ಮೂಲಸೌಕರ್ಯ ಸರಬರಾಜು ಮಾಡುವ ಮೂಲಕ ಸ್ಥಳೀಯ ಆಡಳಿತವನ್ನು ಇಶಾ ಬೆಂಬಲಿಸಿದೆ ಎಂದು ಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>