‘ಧೌಲಾ ಕುವಾನ್ ಮತ್ತು ಕರೋಲ್ ಬಾಗ್ ನಡುವಿನ ರಿಡ್ಜ್ ರಸ್ತೆಯ ಬುದ್ಧ ಜಯಂತಿ ಪಾರ್ಕ್ ಬಳಿ ಶುಕ್ರವಾರ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶಂಕಿತ ಐಎಸ್ ಉಗ್ರನನ್ನು ಬಂಧಿಸಲಾಗಿದೆ. ಐಎಸ್ ತಂಡವೊಂದು ದೆಹಲಿಯಲ್ಲಿ ಸಂಚು ನಡೆಸುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಪೊಲೀಸರು ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಸದ್ಯ ಸೆರೆ ಹಿಡಿದಿರುವ ಯೂಸೂಫ್ ಖಾನ್ ರಿಡ್ಜ್ ಪ್ರದೇಶಕ್ಕೆ ಬರುತ್ತಿರುವುದಾಗಿ ನಮಗೆ ಮಾಹಿತಿ ಸಿಕ್ಕಿತ್ತು. ಅದರಂತೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ,’ ಎಂದು ಪೊಲೀಸ್ ಉಪ ಆಯುಕ್ತ (ವಿಶೇಷ ವಿಭಾಗ) ಪ್ರಮೋದ್ ಸಿಂಗ್ ಕುಶ್ವಾಹಾ ಹೇಳಿದರು.