<p><strong>ನವದೆಹಲಿ</strong>: 1994ರ ಇಸ್ರೊ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಲೋಪದ ಕುರಿತು ಮೊಕದ್ದಮೆ ದಾಖಲಿಸಲು ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ಸಮಿತಿಯ ವರದಿ ಆಧಾರವಾಗುವುದಿಲ್ಲ. ಸಿಬಿಐ ತನಿಖೆಯನ್ನು ನಡೆಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಈ ಪ್ರಕರಣದಲ್ಲಿ ಇಸ್ರೊದ ವಿಜ್ಞಾನಿ ನಂಬಿ ನಾರಾಯಣನ್ (79) ಅವರನ್ನು ಖುಲಾಸೆಗೊಳಿಸಲಾಗಿತ್ತು ಮತ್ತು ₹50 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ಆದೇಶ ನೀಡಿತ್ತು. ಬೇಹುಗಾರಿಕೆಯ ಈ ಪ್ರಕರಣದಲ್ಲಿ ನಾರಾಯಣನ್ ಅವರನ್ನು ಸಿಲುಕಿಸಿದ್ದರ ಸಂಬಂಧ ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ಸಮಿತಿಯನ್ನು ರಚಿಸಿತ್ತು.</p>.<p>ಈ ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಿಸಿರುವ ಸಿಬಿಐ, ತನಿಖೆ ನಡೆಸಿ ಕಾನೂನು ಪ್ರಕಾರ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>’ಕೇವಲ ವರದಿ ಆಧಾರದ ಮೇಲೆ ಆರೋಪಿಗಳ ವಿರುದ್ಧ ಸಿಬಿಐಗೆ ಕ್ರಮಕೈಗೊಳ್ಳಲು ಅವಕಾಶ ಇಲ್ಲ. ತನಿಖೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಬೇಕು’ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಹೇಳಿದೆ.</p>.<p>ಸಮಿತಿ ವರದಿ ಮೇಲೆಯೇ ಸಿಬಿಐ ಅವಲಂಬನೆಯಾಗಿದೆ. ಹೀಗಾಗಿ, ಈ ವರದಿಯನ್ನು ತಮ್ಮ ಜತೆಯೂ ಹಂಚಿಕೊಳ್ಳಬೇಕು ಎಂದು ಆರೋಪಿಯೊಬ್ಬರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಪೀಠವು, ‘ವರದಿಯು ಕೇವಲ ಪ್ರಾಥಮಿಕ ಮಾಹಿತಿಯನ್ನು ಒಳಗೊಂಡಿರುವುದರಿಂದ ಸಿಬಿಐ ತನಿಖೆ ನಡೆಸಲಿದೆ’ ಎಂದು ಹೇಳಿದೆ.</p>.<p>ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿಯೂ ವರದಿಯ ಕೆಲವು ಅಂಶಗಳನ್ನು ಒಳಗೊಂಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠದ ಗಮನಕ್ಕೆ ತಂದರು.</p>.<p>ಸಮಿತಿಯ ವರದಿಯನ್ನು ಮಾತ್ರ ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಮತ್ತು ಕಾನೂನಿನ ಪ್ರಕಾರ ಅಧಿಕಾರಿಗಳು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ ಎಂದು ಪೀಠವು ತಿಳಿಸಿದೆ.</p>.<p>ಎಫ್ಐಆರ್ ದಾಖಲಿಸಲಾಗಿದೆ. ಆದರೆ, ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿಲ್ಲ ಎನ್ನುವುದನ್ನು ವರದಿಯಲ್ಲೂ ಹೇಳಲಾಗಿದೆ ಎಂದು ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 1994ರ ಇಸ್ರೊ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಲೋಪದ ಕುರಿತು ಮೊಕದ್ದಮೆ ದಾಖಲಿಸಲು ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ಸಮಿತಿಯ ವರದಿ ಆಧಾರವಾಗುವುದಿಲ್ಲ. ಸಿಬಿಐ ತನಿಖೆಯನ್ನು ನಡೆಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಈ ಪ್ರಕರಣದಲ್ಲಿ ಇಸ್ರೊದ ವಿಜ್ಞಾನಿ ನಂಬಿ ನಾರಾಯಣನ್ (79) ಅವರನ್ನು ಖುಲಾಸೆಗೊಳಿಸಲಾಗಿತ್ತು ಮತ್ತು ₹50 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ಆದೇಶ ನೀಡಿತ್ತು. ಬೇಹುಗಾರಿಕೆಯ ಈ ಪ್ರಕರಣದಲ್ಲಿ ನಾರಾಯಣನ್ ಅವರನ್ನು ಸಿಲುಕಿಸಿದ್ದರ ಸಂಬಂಧ ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ಸಮಿತಿಯನ್ನು ರಚಿಸಿತ್ತು.</p>.<p>ಈ ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಿಸಿರುವ ಸಿಬಿಐ, ತನಿಖೆ ನಡೆಸಿ ಕಾನೂನು ಪ್ರಕಾರ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>’ಕೇವಲ ವರದಿ ಆಧಾರದ ಮೇಲೆ ಆರೋಪಿಗಳ ವಿರುದ್ಧ ಸಿಬಿಐಗೆ ಕ್ರಮಕೈಗೊಳ್ಳಲು ಅವಕಾಶ ಇಲ್ಲ. ತನಿಖೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಬೇಕು’ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಹೇಳಿದೆ.</p>.<p>ಸಮಿತಿ ವರದಿ ಮೇಲೆಯೇ ಸಿಬಿಐ ಅವಲಂಬನೆಯಾಗಿದೆ. ಹೀಗಾಗಿ, ಈ ವರದಿಯನ್ನು ತಮ್ಮ ಜತೆಯೂ ಹಂಚಿಕೊಳ್ಳಬೇಕು ಎಂದು ಆರೋಪಿಯೊಬ್ಬರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಪೀಠವು, ‘ವರದಿಯು ಕೇವಲ ಪ್ರಾಥಮಿಕ ಮಾಹಿತಿಯನ್ನು ಒಳಗೊಂಡಿರುವುದರಿಂದ ಸಿಬಿಐ ತನಿಖೆ ನಡೆಸಲಿದೆ’ ಎಂದು ಹೇಳಿದೆ.</p>.<p>ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿಯೂ ವರದಿಯ ಕೆಲವು ಅಂಶಗಳನ್ನು ಒಳಗೊಂಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠದ ಗಮನಕ್ಕೆ ತಂದರು.</p>.<p>ಸಮಿತಿಯ ವರದಿಯನ್ನು ಮಾತ್ರ ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಮತ್ತು ಕಾನೂನಿನ ಪ್ರಕಾರ ಅಧಿಕಾರಿಗಳು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ ಎಂದು ಪೀಠವು ತಿಳಿಸಿದೆ.</p>.<p>ಎಫ್ಐಆರ್ ದಾಖಲಿಸಲಾಗಿದೆ. ಆದರೆ, ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿಲ್ಲ ಎನ್ನುವುದನ್ನು ವರದಿಯಲ್ಲೂ ಹೇಳಲಾಗಿದೆ ಎಂದು ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>