ಗುಜರಾತ್ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಅವರು ರಾಜ್ಯ ಸರ್ಕಾರ ಟೀಕಿಸುವುದರಲ್ಲಿ ಹೆಸರುವಾಸಿಯಾಗಿದ್ದರು. 2002ರ ಗುಜರಾತ್ ಗಲಭೆಯಲ್ಲಿ ಮೋದಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಬಹಿರಂಗವಾಗಿ ಟೀಕಿಸಿದ್ದರು. ಕೋಮು ಗಲಭೆಯ ಸಂದರ್ಭದಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದನ್ನು ರಾಜ್ಯ ಸರ್ಕಾರ ತಡೆದಿತ್ತು ಎಂದು ಆರೋಪಿಸಿದ್ದರು. ಸದ್ಯ 74 ವರ್ಷದ ಮಾಜಿ ಅಧಿಕಾರಿಗೆ ಅವರ ಸೇವೆಯ ಸಮಯದಲ್ಲಿ ಬಡ್ತಿ ನಿರಾಕರಿಸಲಾಯಿತು. ನ್ಯಾಯಾಲಯದ ಆದೇಶದ ನಂತರವೇ ಅವರಿಗೆ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಲಾಗಿತ್ತು.