<p><strong>ನವದೆಹಲಿ: </strong>ಬೇಹುಗಾರಿಕೆಯಲ್ಲಿ ತೊಡಗಿದ್ದರು ಎಂಬ ಆರೋಪದ ಮೇಲೆ ಇಸ್ರೊ ವಿಜ್ಞಾನಿ ಡಾ.ನಂಬಿ ನಾರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಭಾರಿ ಮುಜುಗರ ಹಾಗೂ ಯಾತನೆ ಆಗುವಂತೆ ಮಾಡಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ನಡೆಸಿದ ಉನ್ನತ ಮಟ್ಟದ ತನಿಖೆಯ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ.</p>.<p>ಸಮಿತಿಯು ಮುಚ್ಚಿದ ಲಕೋಟೆಯಲ್ಲಿ ತನ್ನ ವರದಿಯನ್ನು ಇತ್ತೀಚೆಗೆ ಸಲ್ಲಿಸಿದೆ ಎಂದು ಮೂಲಗಳು ಹೇಳಿವೆ.</p>.<p>ಡಾ.ನಾರಾಯಣನ್ ಅವರ ‘ಅಕ್ರಮ ಬಂಧನ’ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಲು ಸುಪ್ರೀಂಕೋರ್ಟ್ 2018ರ ಸೆ. 14ರಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.</p>.<p>ಅಲ್ಲದೇ, ನಾರಾಯಣನ್ ಅವರಿಗೆ ₹ 50 ಲಕ್ಷ ಪರಿಹಾರ ಮೊತ್ತ ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು.</p>.<p>ದೇಶದ ಬಾಹ್ಯಾಕಾಶ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇತರ ಮೂವರೊಂದಿಗೆ ಸೇರಿ ವಿದೇಶಗಳಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾರಾಯಣನ್ ಅವರನ್ನು 1994ರಲ್ಲಿ ಬಂಧಿಸಲಾಗಿತ್ತು. ಆಗ ಅವರು, ಇಸ್ರೊದ ಕ್ರಯೋಜಿನಿಕ್ ಪ್ರಾಜೆಕ್ಟ್ನ ನಿರ್ದೇಶಕರಾಗಿದ್ದರು.</p>.<p>‘ಕೇರಳ ಪೊಲೀಸರು ಇಡೀ ಪ್ರಕರಣವನ್ನು ತಿರುಚಿ, ನನ್ನ ವಿರುದ್ಧ ಆರೋಪ ಹೊರಿಸಿದ್ದಾರೆ. ನಾನು ಮಾರಾಟ ಮಾಡಲು ಕಳುವು ಮಾಡಿದ್ದೇನೆ ಎನ್ನಲಾದ ತಂತ್ರಜ್ಞಾನ ಆ ವೇಳೆ (1994ರಲ್ಲಿ) ಅಸ್ತಿತ್ವದಲ್ಲಿಯೇ ಇರಲಿಲ್ಲ’ ಎಂದು ನಾರಾಯಣನ್ ಹೇಳಿದ್ದರು.</p>.<p>ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಸಿಬಿಐ, ನಾರಾಯಣನ್ ಅವರನ್ನು ದೋಷಮುಕ್ತರನ್ನಾಗಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಬೇಹುಗಾರಿಕೆಯಲ್ಲಿ ತೊಡಗಿದ್ದರು ಎಂಬ ಆರೋಪದ ಮೇಲೆ ಇಸ್ರೊ ವಿಜ್ಞಾನಿ ಡಾ.ನಂಬಿ ನಾರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಭಾರಿ ಮುಜುಗರ ಹಾಗೂ ಯಾತನೆ ಆಗುವಂತೆ ಮಾಡಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ನಡೆಸಿದ ಉನ್ನತ ಮಟ್ಟದ ತನಿಖೆಯ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ.</p>.<p>ಸಮಿತಿಯು ಮುಚ್ಚಿದ ಲಕೋಟೆಯಲ್ಲಿ ತನ್ನ ವರದಿಯನ್ನು ಇತ್ತೀಚೆಗೆ ಸಲ್ಲಿಸಿದೆ ಎಂದು ಮೂಲಗಳು ಹೇಳಿವೆ.</p>.<p>ಡಾ.ನಾರಾಯಣನ್ ಅವರ ‘ಅಕ್ರಮ ಬಂಧನ’ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಲು ಸುಪ್ರೀಂಕೋರ್ಟ್ 2018ರ ಸೆ. 14ರಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.</p>.<p>ಅಲ್ಲದೇ, ನಾರಾಯಣನ್ ಅವರಿಗೆ ₹ 50 ಲಕ್ಷ ಪರಿಹಾರ ಮೊತ್ತ ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು.</p>.<p>ದೇಶದ ಬಾಹ್ಯಾಕಾಶ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇತರ ಮೂವರೊಂದಿಗೆ ಸೇರಿ ವಿದೇಶಗಳಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾರಾಯಣನ್ ಅವರನ್ನು 1994ರಲ್ಲಿ ಬಂಧಿಸಲಾಗಿತ್ತು. ಆಗ ಅವರು, ಇಸ್ರೊದ ಕ್ರಯೋಜಿನಿಕ್ ಪ್ರಾಜೆಕ್ಟ್ನ ನಿರ್ದೇಶಕರಾಗಿದ್ದರು.</p>.<p>‘ಕೇರಳ ಪೊಲೀಸರು ಇಡೀ ಪ್ರಕರಣವನ್ನು ತಿರುಚಿ, ನನ್ನ ವಿರುದ್ಧ ಆರೋಪ ಹೊರಿಸಿದ್ದಾರೆ. ನಾನು ಮಾರಾಟ ಮಾಡಲು ಕಳುವು ಮಾಡಿದ್ದೇನೆ ಎನ್ನಲಾದ ತಂತ್ರಜ್ಞಾನ ಆ ವೇಳೆ (1994ರಲ್ಲಿ) ಅಸ್ತಿತ್ವದಲ್ಲಿಯೇ ಇರಲಿಲ್ಲ’ ಎಂದು ನಾರಾಯಣನ್ ಹೇಳಿದ್ದರು.</p>.<p>ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಸಿಬಿಐ, ನಾರಾಯಣನ್ ಅವರನ್ನು ದೋಷಮುಕ್ತರನ್ನಾಗಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>