ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊ ಬೇಹುಗಾರಿಕೆ ಪ್ರಕರಣ, ಮುಂದಿನ ವಾರ ವಿಚಾರಣೆ: ಸುಪ್ರೀಂಕೋರ್ಟ್‌

Last Updated 5 ಏಪ್ರಿಲ್ 2021, 11:31 IST
ಅಕ್ಷರ ಗಾತ್ರ

ನವದೆಹಲಿ: ಬೇಹುಗಾರಿಕೆ ಆರೋಪದ ಮೇಲೆ ಇಸ್ರೊ ವಿಜ್ಞಾನಿ ಡಾ. ನಂಬಿ ನಾಯರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟಿದ್ದ ಪ್ರಕರಣದ ವರದಿಯ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ನಾರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಭಾರಿ ಮುಜುಗರ ಹಾಗೂ ಯಾತನೆ ಆಗುವಂತೆ ಮಾಡಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ನಡೆಸಿದ ಉನ್ನತ ಮಟ್ಟದ ತನಿಖೆಯ ವರದಿಯನ್ನು ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಈ ವರದಿ ಕುರಿತ ವಿಚಾರಣೆಯನ್ನು ಮುಂದಿನವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

ಡಾ.ನಾರಾಯಣನ್‌ ಅವರ ‘ಅಕ್ರಮ ಬಂಧನ’ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ 2018ರ ಸೆ. 14ರಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT