ನವದೆಹಲಿ: ಬೇಹುಗಾರಿಕೆ ಆರೋಪದ ಮೇಲೆ ಇಸ್ರೊ ವಿಜ್ಞಾನಿ ಡಾ. ನಂಬಿ ನಾಯರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟಿದ್ದ ಪ್ರಕರಣದ ವರದಿಯ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ನಾರಾಯಣನ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಭಾರಿ ಮುಜುಗರ ಹಾಗೂ ಯಾತನೆ ಆಗುವಂತೆ ಮಾಡಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ನಡೆಸಿದ ಉನ್ನತ ಮಟ್ಟದ ತನಿಖೆಯ ವರದಿಯನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಈ ವರದಿ ಕುರಿತ ವಿಚಾರಣೆಯನ್ನು ಮುಂದಿನವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಡಾ.ನಾರಾಯಣನ್ ಅವರ ‘ಅಕ್ರಮ ಬಂಧನ’ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಲು ಸುಪ್ರೀಂಕೋರ್ಟ್ 2018ರ ಸೆ. 14ರಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.