<p><strong>ನವದೆಹಲಿ: </strong>ಕೋವಿಡ್ -19 ಚಿಕಿತ್ಸೆಗಾಗಿ ಬಳಸುವ ರೆಮ್ಡೆಸಿವಿರ್ ಔಷಧಿಯನ್ನು ಆಕ್ಸಿಜನ್ ಸಪೋರ್ಟ್ ಇರುವವರಿಗೆ ಮಾತ್ರ ನೀಡಬೇಕು ಎಂಬ ಹೊಸ ಪ್ರೋಟೊಕಾಲ್ ನೋಡಿದರೆ ಜನರು ಸಾಯಬೇಕೆಂದು ಕೇಂದ್ರ ಸರ್ಕಾರವು ಬಯಸಿದಂತೆ ತೋರುತ್ತದೆ ಎಂದು ದೆಹಲಿ ಹೈಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಇದು ತಪ್ಪು. ಇದು ಬುದ್ಧಿ ಬಳಸದೇ ಮಾಡಿರುವ ನಿರ್ಧಾರ. ಈಗ ಆಮ್ಲಜನಕವಿಲ್ಲದ ಸಪೋರ್ಟ್ ಇಲ್ಲದ ಕೋವಿಡ್ ರೋಗಿಗಳಿಗೆ ರೆಮ್ಡಿಸಿವಿರ್ ಸಿಗುವುದಿಲ್ಲ. ಇದು ನೀವು ಜನರು ಸಾಯಬೇಕೆಂದು ಬಯಸುತ್ತಿದ್ದೀರಿ ಎಂಬಂತೆ ತೋರುತ್ತಿದೆ’ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಔಷಧದ ಕೊರತೆಯನ್ನು ಕಡಿಮೆ ಮಾಡಲು ಕೇಂದ್ರವು ಪ್ರೋಟೊಕಾಲ್ ಅನ್ನು ಬದಲಾಯಿಸುತ್ತಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>‘ಇದು ಸಂಪೂರ್ಣ ಅಸಮರ್ಪಕ ನಿರ್ವಹಣೆ’ ಎಂದು ನ್ಯಾಯಾಲಯ ಅಸಮಾಧಾನ ಹೊರಹಾಕಿದೆ.</p>.<p>ಅಗತ್ಯವಿದ್ದ 6 ಡೋಸ್ ರೆಮ್ಡಿಸಿವಿರ್ ಔಷಧದ ಬದಲು ಕೇವಲ 3 ಡೋಸ್ ಪಡೆದ ಕೋವಿಡ್–19 ಸೋಂಕಿತ ವಕೀಲರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ರೋಗಿಯು ಮಂಗಳವಾರ ರಾತ್ರಿ ಉಳಿದ ಮೂರು ಡೋಸ್ ಔಷಧಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್ -19 ಚಿಕಿತ್ಸೆಗಾಗಿ ಬಳಸುವ ರೆಮ್ಡೆಸಿವಿರ್ ಔಷಧಿಯನ್ನು ಆಕ್ಸಿಜನ್ ಸಪೋರ್ಟ್ ಇರುವವರಿಗೆ ಮಾತ್ರ ನೀಡಬೇಕು ಎಂಬ ಹೊಸ ಪ್ರೋಟೊಕಾಲ್ ನೋಡಿದರೆ ಜನರು ಸಾಯಬೇಕೆಂದು ಕೇಂದ್ರ ಸರ್ಕಾರವು ಬಯಸಿದಂತೆ ತೋರುತ್ತದೆ ಎಂದು ದೆಹಲಿ ಹೈಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಇದು ತಪ್ಪು. ಇದು ಬುದ್ಧಿ ಬಳಸದೇ ಮಾಡಿರುವ ನಿರ್ಧಾರ. ಈಗ ಆಮ್ಲಜನಕವಿಲ್ಲದ ಸಪೋರ್ಟ್ ಇಲ್ಲದ ಕೋವಿಡ್ ರೋಗಿಗಳಿಗೆ ರೆಮ್ಡಿಸಿವಿರ್ ಸಿಗುವುದಿಲ್ಲ. ಇದು ನೀವು ಜನರು ಸಾಯಬೇಕೆಂದು ಬಯಸುತ್ತಿದ್ದೀರಿ ಎಂಬಂತೆ ತೋರುತ್ತಿದೆ’ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಔಷಧದ ಕೊರತೆಯನ್ನು ಕಡಿಮೆ ಮಾಡಲು ಕೇಂದ್ರವು ಪ್ರೋಟೊಕಾಲ್ ಅನ್ನು ಬದಲಾಯಿಸುತ್ತಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>‘ಇದು ಸಂಪೂರ್ಣ ಅಸಮರ್ಪಕ ನಿರ್ವಹಣೆ’ ಎಂದು ನ್ಯಾಯಾಲಯ ಅಸಮಾಧಾನ ಹೊರಹಾಕಿದೆ.</p>.<p>ಅಗತ್ಯವಿದ್ದ 6 ಡೋಸ್ ರೆಮ್ಡಿಸಿವಿರ್ ಔಷಧದ ಬದಲು ಕೇವಲ 3 ಡೋಸ್ ಪಡೆದ ಕೋವಿಡ್–19 ಸೋಂಕಿತ ವಕೀಲರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ರೋಗಿಯು ಮಂಗಳವಾರ ರಾತ್ರಿ ಉಳಿದ ಮೂರು ಡೋಸ್ ಔಷಧಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>