<p><strong>ನವದೆಹಲಿ</strong>: ತಮಿಳುನಾಡಿನಲ್ಲಿರುವ ದಕ್ಷಿಣ ಭಾರತದ ಪ್ರಮುಖ ಚಿನ್ನ ವ್ಯಾಪಾರಿಗೆ ಸೇರಿದ ಕಚೇರಿ, ಮಳಿಗೆಗಳ ಮೇಲೆ ನಡೆಸಿದ ದಾಳಿ ವೇಳೆ, ಅಘೋಷಿತ ₹ 1,000 ಕೋಟಿಗೂ ಅಧಿಕ ಮೊತ್ತದ ಆದಾಯವನ್ನು ಪತ್ತೆ ಹಚ್ಚಲಾಗಿದೆ ಎಂದು ಆದಾಯ ತೆರಿಗೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಈ ದಾಳಿ ವೇಳೆ ಪತ್ತೆಯಾದ ಲೆಕ್ಕಪತ್ರ ಇಲ್ಲದ ₹ 1.2 ಕೋಟಿ ನಗದನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿರುವ ಅಧಿಕಾರಿಗಳು, ವ್ಯಾಪಾರಿಯ ಹೆಸರು ಹಾಗೂ ಇತರ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.</p>.<p>ಮಾರ್ಚ್ 4ರಂದು ಚೆನ್ನೈ, ಮುಂಬೈ, ಕೊಯಮತ್ತೂರು, ಮದುರೈ, ತಿರುಚಿರಾಪಳ್ಳಿ, ತ್ರಿಶ್ಶೂರ್, ನೆಲ್ಲೂರು, ಜೈಪುರ ಹಾಗೂ ಇಂದೋರ್ನ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿತ್ತು.</p>.<p>‘ಲೆಕ್ಕಪತ್ರ ಇರದ ನಗದು ವ್ಯವಹಾರ, ಖೊಟ್ಟಿ ಕ್ಯಾಶ್ ಕ್ರೆಡಿಟ್, ನೋಟು ರದ್ದತಿ ವೇಳೆ ಮಾಡಲಾದ ಠೇವಣಿಗಳು ಸೇರಿದಂತೆ ಲೆಕ್ಕಪತ್ರ ಇಲ್ಲದ ವ್ಯವಹಾರಗಳ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ದಾಳಿ ವೇಳೆ ಸಂಗ್ರಹಿಸಲಾಗಿದೆ’ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪ್ರಕಟಣೆ ತಿಳಿಸಿದೆ.</p>.<p>‘ಚಿನ್ನದ ವ್ಯಾಪಾರಿ ಖರೀದಿಸಿರುವ ಚಿನ್ನದ ಗಟ್ಟಿಗಳಿಗೆ ಸಂಬಂಧಿಸಿದಂತೆ ಲೆಕ್ಕಪತ್ರ ಇಲ್ಲ. ಆದರೆ, ಹಳೆ ಚಿನ್ನವನ್ನು ಬಳಸಿ, ಆಭರಣಗಳನ್ನು ಮಾಡುವಾಗ ನಷ್ಟವಾಗಿರುವ ಹಾಗೂ ಸಾಲ ಹೊಂದಿರುವ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ಸಹ ಪತ್ತೆಯಾಗಿದೆ’ ಎಂದೂ ಪ್ರಕಟಣೆ ತಿಳಿಸಿದೆ.</p>.<p>ವಿಧಾನಸಭೆ ಚುನಾವಣೆ ಕಣ ನಿಧಾನವಾಗಿ ರಂಗೇರುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿನ ಪ್ರಮುಖ ಜ್ಯುವೆಲ್ಲರಿ ವ್ಯಾಪಾರಿ ಮೇಲೆ ನಡೆದ ಆದಾಯ ತೆರಿಗೆ ದಾಳಿ ಕುತೂಹಲಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಮಿಳುನಾಡಿನಲ್ಲಿರುವ ದಕ್ಷಿಣ ಭಾರತದ ಪ್ರಮುಖ ಚಿನ್ನ ವ್ಯಾಪಾರಿಗೆ ಸೇರಿದ ಕಚೇರಿ, ಮಳಿಗೆಗಳ ಮೇಲೆ ನಡೆಸಿದ ದಾಳಿ ವೇಳೆ, ಅಘೋಷಿತ ₹ 1,000 ಕೋಟಿಗೂ ಅಧಿಕ ಮೊತ್ತದ ಆದಾಯವನ್ನು ಪತ್ತೆ ಹಚ್ಚಲಾಗಿದೆ ಎಂದು ಆದಾಯ ತೆರಿಗೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಈ ದಾಳಿ ವೇಳೆ ಪತ್ತೆಯಾದ ಲೆಕ್ಕಪತ್ರ ಇಲ್ಲದ ₹ 1.2 ಕೋಟಿ ನಗದನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿರುವ ಅಧಿಕಾರಿಗಳು, ವ್ಯಾಪಾರಿಯ ಹೆಸರು ಹಾಗೂ ಇತರ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.</p>.<p>ಮಾರ್ಚ್ 4ರಂದು ಚೆನ್ನೈ, ಮುಂಬೈ, ಕೊಯಮತ್ತೂರು, ಮದುರೈ, ತಿರುಚಿರಾಪಳ್ಳಿ, ತ್ರಿಶ್ಶೂರ್, ನೆಲ್ಲೂರು, ಜೈಪುರ ಹಾಗೂ ಇಂದೋರ್ನ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿತ್ತು.</p>.<p>‘ಲೆಕ್ಕಪತ್ರ ಇರದ ನಗದು ವ್ಯವಹಾರ, ಖೊಟ್ಟಿ ಕ್ಯಾಶ್ ಕ್ರೆಡಿಟ್, ನೋಟು ರದ್ದತಿ ವೇಳೆ ಮಾಡಲಾದ ಠೇವಣಿಗಳು ಸೇರಿದಂತೆ ಲೆಕ್ಕಪತ್ರ ಇಲ್ಲದ ವ್ಯವಹಾರಗಳ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ದಾಳಿ ವೇಳೆ ಸಂಗ್ರಹಿಸಲಾಗಿದೆ’ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪ್ರಕಟಣೆ ತಿಳಿಸಿದೆ.</p>.<p>‘ಚಿನ್ನದ ವ್ಯಾಪಾರಿ ಖರೀದಿಸಿರುವ ಚಿನ್ನದ ಗಟ್ಟಿಗಳಿಗೆ ಸಂಬಂಧಿಸಿದಂತೆ ಲೆಕ್ಕಪತ್ರ ಇಲ್ಲ. ಆದರೆ, ಹಳೆ ಚಿನ್ನವನ್ನು ಬಳಸಿ, ಆಭರಣಗಳನ್ನು ಮಾಡುವಾಗ ನಷ್ಟವಾಗಿರುವ ಹಾಗೂ ಸಾಲ ಹೊಂದಿರುವ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ಸಹ ಪತ್ತೆಯಾಗಿದೆ’ ಎಂದೂ ಪ್ರಕಟಣೆ ತಿಳಿಸಿದೆ.</p>.<p>ವಿಧಾನಸಭೆ ಚುನಾವಣೆ ಕಣ ನಿಧಾನವಾಗಿ ರಂಗೇರುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿನ ಪ್ರಮುಖ ಜ್ಯುವೆಲ್ಲರಿ ವ್ಯಾಪಾರಿ ಮೇಲೆ ನಡೆದ ಆದಾಯ ತೆರಿಗೆ ದಾಳಿ ಕುತೂಹಲಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>