ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಥ ಚಟರ್ಜಿ ಆಪ್ತ ಸಹಾಯಕನ ಪತ್ತೆಗೆ ಶೋಧ: ಜಾರ್ಖಂಡ್ ಹೋಟೆಲ್ ಮೇಲೆ ಐಟಿ ದಾಳಿ

Last Updated 20 ಆಗಸ್ಟ್ 2022, 9:57 IST
ಅಕ್ಷರ ಗಾತ್ರ

ಭುವನೇಶ್ವರ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ ಸಹಾಯಕನ ಪತ್ತೆಗೆ ಆದಾಯ ತೆರಿಗೆ ಇಲಾಖೆಯು ಶೋಧ ನಡೆಸುತ್ತಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಜಾರ್ಖಂಡ್‌ನ ಹೋಟೆಲ್‌ ಒಂದರ ಮೇಲೆ ದಾಳಿ ನಡೆಸಿದೆ.

ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತ ಸಹಾಯಕನ ಕುರಿತ ಖಚಿತ ಮಾಹಿತಿ ದೊರೆತ ನಂತರ ಈ ದಾಳಿ ನಡೆಸಲಾಗಿದೆ.

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಭಂಡಾರಾ ಪಾರ್ಕ್‌ನಲ್ಲಿರುವ ಹೋಟೆಲ್‌ನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲ್ಟಿಪ್ಲೆಕ್ಸ್, ಹೋಟೆಲ್ ಮತ್ತು ಮದುವೆ ಮಂಟಪವನ್ನು ಒಳಗೊಂಡಿರುವ ಪಾರ್ಕ್‌ನ ಎಲ್ಲಾ ಪ್ರವೇಶದ್ವಾರಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ತೆರಿಗೆ ಇಲಾಖೆ ತಂಡವು ಆಗಮಿಸುವ ಗಂಟೆಗಳ ಮೊದಲು ವ್ಯಕ್ತಿ ಹೋಟೆಲ್‌ನಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅರ್ಪಿತಾ ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT