<p><strong>ಭುವನೇಶ್ವರ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ ಸಹಾಯಕನ ಪತ್ತೆಗೆ ಆದಾಯ ತೆರಿಗೆ ಇಲಾಖೆಯು ಶೋಧ ನಡೆಸುತ್ತಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಜಾರ್ಖಂಡ್ನ ಹೋಟೆಲ್ ಒಂದರ ಮೇಲೆ ದಾಳಿ ನಡೆಸಿದೆ.</p>.<p>ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತ ಸಹಾಯಕನ ಕುರಿತ ಖಚಿತ ಮಾಹಿತಿ ದೊರೆತ ನಂತರ ಈ ದಾಳಿ ನಡೆಸಲಾಗಿದೆ.</p>.<p>ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಭಂಡಾರಾ ಪಾರ್ಕ್ನಲ್ಲಿರುವ ಹೋಟೆಲ್ನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಲ್ಟಿಪ್ಲೆಕ್ಸ್, ಹೋಟೆಲ್ ಮತ್ತು ಮದುವೆ ಮಂಟಪವನ್ನು ಒಳಗೊಂಡಿರುವ ಪಾರ್ಕ್ನ ಎಲ್ಲಾ ಪ್ರವೇಶದ್ವಾರಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ತೆರಿಗೆ ಇಲಾಖೆ ತಂಡವು ಆಗಮಿಸುವ ಗಂಟೆಗಳ ಮೊದಲು ವ್ಯಕ್ತಿ ಹೋಟೆಲ್ನಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.</p>.<p>ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್ಎಸ್ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅರ್ಪಿತಾ ಅವರನ್ನು ಬಂಧಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ ಸಹಾಯಕನ ಪತ್ತೆಗೆ ಆದಾಯ ತೆರಿಗೆ ಇಲಾಖೆಯು ಶೋಧ ನಡೆಸುತ್ತಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಜಾರ್ಖಂಡ್ನ ಹೋಟೆಲ್ ಒಂದರ ಮೇಲೆ ದಾಳಿ ನಡೆಸಿದೆ.</p>.<p>ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತ ಸಹಾಯಕನ ಕುರಿತ ಖಚಿತ ಮಾಹಿತಿ ದೊರೆತ ನಂತರ ಈ ದಾಳಿ ನಡೆಸಲಾಗಿದೆ.</p>.<p>ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಭಂಡಾರಾ ಪಾರ್ಕ್ನಲ್ಲಿರುವ ಹೋಟೆಲ್ನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಲ್ಟಿಪ್ಲೆಕ್ಸ್, ಹೋಟೆಲ್ ಮತ್ತು ಮದುವೆ ಮಂಟಪವನ್ನು ಒಳಗೊಂಡಿರುವ ಪಾರ್ಕ್ನ ಎಲ್ಲಾ ಪ್ರವೇಶದ್ವಾರಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ತೆರಿಗೆ ಇಲಾಖೆ ತಂಡವು ಆಗಮಿಸುವ ಗಂಟೆಗಳ ಮೊದಲು ವ್ಯಕ್ತಿ ಹೋಟೆಲ್ನಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.</p>.<p>ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್ಎಸ್ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅರ್ಪಿತಾ ಅವರನ್ನು ಬಂಧಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>