<p><strong>ಕೋಲ್ಕತ್ತ:</strong> ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯಲ್ಲಿ ಭಾಗವಹಿಸಬೇಕೋ ಬೇಡವೋ ಎಂಬುದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಬಿಟ್ಟ ವಿಚಾರ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭಿಪ್ರಾಯಪಟ್ಟಿದೆ.</p>.<p>ಪ್ರಧಾನಿ ಮೋದಿ ಅವರ ರ್ಯಾಲಿಯಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪಾಲ್ಗೊಳ್ಳಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಊಹಾಪೋಹಾಗಳು ಹರಿದಾಡುತ್ತಿದೆ.</p>.<p>ಹಾಗೊಂದು ವೇಳೆ ಆರೋಗ್ಯ ಹಾಗೂ ವಾತಾವರಣ ಹೊಂದಿಕೆಯಾಗಿ ಭಾರತೀಯ ಮಾಜಿ ಕ್ರಿಕೆಟಿಗ ರ್ಯಾಲಿಯಲ್ಲಿ ಭಾಗವಹಿಸುವುದಾದರೆ ಅವರಿಗೆ ಸ್ವಾಗತವನ್ನುಕೋರಲಿದ್ದೇವೆ ಎಂದು ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ ಕೋಲ್ಕತ್ತದಲ್ಲಿ ವರದಿಗಾರರಿಗೆ ತಿಳಿಸಿದರು.</p>.<p>ಸೌರವ್ ಗಂಗೂಲಿ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ವಿಚಾರ ನಮಗೆ ತಿಳಿದಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಗಂಗೂಲಿ ಇರುವಿಕೆಯನ್ನುಎಲ್ಲರೂ ಇಷ್ಟಪಡಲಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/bcci-president-sourav-ganguly-undergoes-second-round-of-angioplasty-two-stents-inserted-800395.html" itemprop="url">ಎರಡನೇ ಬಾರಿಗೆ ಯಶಸ್ವಿ ಆ್ಯಂಜಿಯೊಪ್ಲಾಸ್ಟಿಗೊಳಗಾದ ಸೌರವ್ ಗಂಗೂಲಿ </a></p>.<p>ಆದರೆ ತಕ್ಷಣಕ್ಕೆ ಸೌರವ್ ಗಂಗೂಲಿ ಅವರಿಂದ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿಲ್ಲ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಸೌರವ್ ಗಂಗೂಲಿ ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂಬ ಬಗ್ಗೆ ವರದಿಗಳು ಬಂದಿದ್ದವು.</p>.<p>ಜನವರಿ 28ರಂದು ಸೌರವ್ ಗಂಗೂಲಿ ಅವರಿಗೆ ಎರಡನೇ ಬಾರಿಗೆ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್ ಆಳವಡಿಸಿದ್ದರು. ಬಳಿಕ ಜನವರಿ 31ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದರು.</p>.<p>ಜನವರಿ 2ರಂದು ಸೌರವ್ ಗಂಗೂಲಿ ಮೊದಲ ಬಾರಿಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯಲ್ಲಿ ಭಾಗವಹಿಸಬೇಕೋ ಬೇಡವೋ ಎಂಬುದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಬಿಟ್ಟ ವಿಚಾರ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭಿಪ್ರಾಯಪಟ್ಟಿದೆ.</p>.<p>ಪ್ರಧಾನಿ ಮೋದಿ ಅವರ ರ್ಯಾಲಿಯಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪಾಲ್ಗೊಳ್ಳಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಊಹಾಪೋಹಾಗಳು ಹರಿದಾಡುತ್ತಿದೆ.</p>.<p>ಹಾಗೊಂದು ವೇಳೆ ಆರೋಗ್ಯ ಹಾಗೂ ವಾತಾವರಣ ಹೊಂದಿಕೆಯಾಗಿ ಭಾರತೀಯ ಮಾಜಿ ಕ್ರಿಕೆಟಿಗ ರ್ಯಾಲಿಯಲ್ಲಿ ಭಾಗವಹಿಸುವುದಾದರೆ ಅವರಿಗೆ ಸ್ವಾಗತವನ್ನುಕೋರಲಿದ್ದೇವೆ ಎಂದು ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ ಕೋಲ್ಕತ್ತದಲ್ಲಿ ವರದಿಗಾರರಿಗೆ ತಿಳಿಸಿದರು.</p>.<p>ಸೌರವ್ ಗಂಗೂಲಿ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ವಿಚಾರ ನಮಗೆ ತಿಳಿದಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಗಂಗೂಲಿ ಇರುವಿಕೆಯನ್ನುಎಲ್ಲರೂ ಇಷ್ಟಪಡಲಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/bcci-president-sourav-ganguly-undergoes-second-round-of-angioplasty-two-stents-inserted-800395.html" itemprop="url">ಎರಡನೇ ಬಾರಿಗೆ ಯಶಸ್ವಿ ಆ್ಯಂಜಿಯೊಪ್ಲಾಸ್ಟಿಗೊಳಗಾದ ಸೌರವ್ ಗಂಗೂಲಿ </a></p>.<p>ಆದರೆ ತಕ್ಷಣಕ್ಕೆ ಸೌರವ್ ಗಂಗೂಲಿ ಅವರಿಂದ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿಲ್ಲ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಸೌರವ್ ಗಂಗೂಲಿ ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂಬ ಬಗ್ಗೆ ವರದಿಗಳು ಬಂದಿದ್ದವು.</p>.<p>ಜನವರಿ 28ರಂದು ಸೌರವ್ ಗಂಗೂಲಿ ಅವರಿಗೆ ಎರಡನೇ ಬಾರಿಗೆ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್ ಆಳವಡಿಸಿದ್ದರು. ಬಳಿಕ ಜನವರಿ 31ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದರು.</p>.<p>ಜನವರಿ 2ರಂದು ಸೌರವ್ ಗಂಗೂಲಿ ಮೊದಲ ಬಾರಿಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>